ಇಲ್ಲಿ ‘ಲಕ್ಷ್ಮಿ’ ಸಿಕ್ಕರೆ ‘ಗೃಹ ಲಕ್ಷ್ಮೀ’

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಹಣ ವಸೂಲಿ.

ಸಚಿವೆಯ ತವರು ಜಿಲ್ಲೆಯಲ್ಲಿ ಹಣ ಪೀಕಿದ ಗ್ರಾಮ ಒನ್ ಸಿಬ್ಬಂದಿ

ಅಥಣಿ :

ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಸರ್ಕಾರದ ನಿಯಮವನ್ನು ಗಾಳಿಗೆ ತೂರುತ್ತಿದ್ದಾರೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈಗಾಗಲೇ ಪ್ರಾರಂಭವಾಗಿದೆ. ಆಯಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಂತೆ ಪ್ರತಿ ಫಲಾನುಭವಿಗಳ ಅರ್ಜಿ ಶುಲ್ಕ ಸರ್ಕಾರವೇ ಭರಿಸುತ್ತಿದೆ. ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳರ್ ಅರ್ಜಿ ಪಕ್ರಿಯೆಗೆ ಯಾವುದೇ ರೀತಿ ಹಣ ಸಂದಾಯ ಮಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಣ ತೆಗೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ

ಆದರೆ ಅದನ್ನು ಪಾಲಿಸದೇ ಇದ್ದ ಹಲವು ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಆದರೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಪ್ರಕ್ರಿಯೆಗೆ ಹಣ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಸರ್ಕಾರದ ನಿಯಮ ಗಾಳಿಗೆ ತೂರಿ ಹಣ ಪೀಕುತ್ತಿರುವ ಕೇಂದ್ರಗಳ ವಿರುದ್ಧ ಸ್ಥಳೀಯ ತಾಲೂಕಾಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಕಾದು ನೋಡಬೇಕು.

 ಮನುಷ್ಯತ್ವ ಮರೆತ ಪೊಲೀಸ್..!

Leave a Reply

Your email address will not be published. Required fields are marked *

error: Content is protected !!