ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಿಂದ ಭ್ರಷ್ಟರ ರಕ್ಷಣೆ- ಆರೋಪ

ಬೆಳಗಾವಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೀದರ್ ನಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳನ್ನು ರಕ್ಷಣೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಓಂಪ್ರಕಾಶ್ ರೊಟ್ಟಿ ಮದನೂರೆ ಆರೋಪಿಸಿದರು.

ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೀದರ್ ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಗಳು ಸಾಕಷ್ಟು ಭ್ರಷ್ಟಾಚಾರ ‌ನಡೆಸಿದ್ದಾರೆ. ಅವರ ಮೇಲೆ ಕ್ರಮ‌ ಜರುಗಿಸಬೇಕೆಂದು ದೂರು ನೀಡಿ ತನಿಖಾ ತಂಡ ತನಿಖೆ ಮಾಡಿ ವರದಿ ನೀಡಿದರೂ ಇಲ್ಲಿಯವರೆಗೂ ಅಧಿಕಾರಿಗಳ ರಕ್ಷಣೆ ಮಾಡಲು ಹೊರಟಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೀದರ್ ಅಧಿಕಾರಿಗಳು ಮಾಡಿರುಗ ಭ್ರಷ್ಟಾಚಾರದ ಪಾಲು ಹೋಗಿರಬೇಕು. ಆದ್ದರಿಂದ ಅಧಿಕಾರಿಗಳ ‌ರಕ್ಷಣೆ ಮಾಡಲು ಹೆಬ್ಬಾಳ್ಕರ್ ಮಾಡುತ್ತಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ ಎಂದರು.
ಮೊಟ್ಟೆ ಹಗರಣದಲ್ಲಿ 6 ಕೋಟಿ ರವಿ ರತ್ನಾಕರ್, ಮಕ್ಕಳ ಪೌಷ್ಟಿಕ ಆಹಾರದ‌ ಹಗರಣದಲ್ಲಿ 25. ಕೋಟಿ ರೂ. ತಿಪ್ಪಣ್ಣ ಶಿರಸಗಿ ಭ್ರಷ್ಟಾಚಾರ ಮಾಡಿದ್ದಾರೆ. ದೂರು‌ ನೀಡಿ ತನಿಖೆಯೂ ಪೂರ್ಣಗೊಂಡಿದೆ ಎಂದರು.
ಬೀದರನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರ ಅಕ್ರಮ ತಾರತಮ್ಯ ನೇಮಕಾತಿ ಅವ್ಯವಹಾರ ಕಳಪೆ ಮಟ್ಟದ ಅಹಾರ ಧಾನ್ಯ ವಿತರಣೆ ಸೆರಿದಂತೆ ಅನೇಕ ಅಕ್ರಮಗಳ ವಿರುದ್ಧ ಹೋರಾಟ ಮಾಡಿದ ಫಲವಾಗಿ ತನಿಖಾ ತಂಡವು ಅಕ್ರಮ ಏಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಲಾಖೆಯ ಭ್ರಷ್ಟ ಅಧಿಕಾರಿಗಳ ರಕ್ಷಣೆ ಮಾಡುವ ಮೂಲಕ ಭ್ರಷ್ಟಾಚಾರದ ಅಧಿಕಾರಿಗಳಿಗೆ ಸಾಥ್ ನೀಡುತ್ತಿದ್ದಾರೆ. ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!