ಸದನಕ್ಕೆ ನುಗ್ಗಿದ ಅಪರಿಚಿತರು..!

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ.

ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ.

ದಿಢೀರ್​​ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಕಲರ್​ ಬಾಂಬ್​​ವೊಂದನ್ನು ಸ್ಪ್ರೇ ಮಾಡಿದ್ದಾನೆ. ಆಗ ಸದನದಲ್ಲಿದ್ದ ಸಚಿವರು, ಸಂಸದರು ಆತಂಕದಿಂದ ಹೊರ ಬಂದಿದ್ದಾರೆ. ಇದೇ ವೇಳೆ ಹೊರಗಿನ ಗೇಟ್​ ಬಳಿಯೂ ವ್ಯಕ್ತಿಯೊಬ್ಬ ಇದೇ ರೀತಿ ಬಣ್ಣವನ್ನು ಸ್ಪ್ರೇ ಮಾಡಿದ್ದಾನೆ.

ಸಂಸತ್ ಭವನದ ಮೇಲಿನ ದಾಳಿಯ ವರ್ಷಾಚರಣೆಯಂದೇ ಈ ಭದ್ರತಾ ಲೋಪ ಆಗಿದೆ.

Leave a Reply

Your email address will not be published. Required fields are marked *

error: Content is protected !!