ಉಡುಪಿ.
ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಹೀಗಾಗಿ ಅಯೋಧ್ಯೆಯ ರಾಮಮಂದಿರಕ್ಕೆ ಹೋಗುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು.
ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ . 140 ಕೋಟಿ ಜನರದ್ದು ಎಂದರು.