24 ಕ್ಕೆ ಬೆಳಗಾವಿಗೆ ಕರವೇ ಗೌಡರು..!

ಬೆಳಗಾವಿ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ‌ ಮೊದಲ ಬಾರಿಗೆ ಇದೇ ದಿ. 24 ರಂದು ಗಡಿಭಾಗ ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿಯ ಕನ್ನಡ ಭವನದಲ್ಲಿ‌ಈ ಸಭೆ ನಡೆಯಲಿದೆ

ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕೀರ್ತಿ ಗೌಡರಿಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಮಾಡಿತು. ಅಷ್ಟೇ ಅಲ್ಲ ಕನ್ನಡ ಅನುಷ್ಠಾನಕ್ಕಾಗಿ ಜೈಲಿಗೆ ಸಹ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜಿಲ್ಲಾಧ್ಯಕ್ಷ ದೀಪಕ‌ ಗುಡಗನಟ್ಟಿ ಅವರೊಂದಿಗೆ ಪೂರ್ವಸಿದ್ಧತೆ ಸಭೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!