ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೇಳಿದವರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದ್ದಾರೆ.
ನಗರದಲ್ಲಿಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಬೆಳಗಾವಿಂದ ನಾನು ಕೂಡ ಒಬ್ಬ ಅಭ್ಯರ್ಥಿ
ಆದರೆ ಪಕ್ಷ ನನಗೆ ಸಹಕರಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕುರುಬರ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಕುರುಬ ಸಮಾಜಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳಲಾಗಿತ್ತು. . ಆದರೆ ಈಗ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಬುಡಾ ಅಧ್ಯಕ್ಷರನ್ನಾಗಿ ಮಾಡಿ ಮುಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುರುಬ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ಚಿಕ್ಕೋಡಿಗೆ ಕುರುಬ ಸಮಾಜಕ್ಕೆ ಹಾಗೂ ಬೆಳಗಾವಿಗೆ ಲಿಂಗಾಯತ ಸಮಾಜಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು ಎಂದು ರಮೇಶ ಕುಡಚಿ ಹೇಳಿದರು.
ಇಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ
ವಿನಯ ನಾವಲಗಟ್ಟಿ ಗೆ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿ ಮುಗಿಗೆ ತುಪ್ಪ ಸವರಿದ್ದಾರೆ.
ಒಬ್ಬರಿಗೆ ಚಾಕೊಲೇಟ್ ಕೊಟ್ಟು ಇನ್ನೊಬ್ಬರಿಗೆ ಬಿರಿಯಾನಿ ತಿನ್ನುವುದು ಆಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.