ಬೆಳಗಾವಿ. ಸದಾ ನಗುಮುಖದ ವ್ಯಕ್ತಿತ್ವ ಹೊಂದಿದ್ದ ಪ್ರದೀಪ ಶೆಟ್ಟಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ದಿನ ಮಧ್ಯರಾತ್ರಿ ನಿಧನರಾದರು

ಮೃತರು ಶಾಸಕ ಅಭಯ ಪಾಟೀಲರ ಆತ್ಮೀಯರಲ್ಲಿ ಒಬ್ಬರಾಗಿದ್ದರು.
ಸಂತಾಪ.
ಪ್ರದೀಪ ಶೆಟ್ಟಿ ನಿಧನಕ್ಕೆ ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ ಬೆನಕೆ ಸೇರಿದಂತೆ ನಗರಸೇವಕರು, ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.