ಸುದ್ದಿ ಸಾರ ಮರೆಯದಿರಿ..!
ಬೆಳಗಾವಿ.ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರವನ್ನು ಪತ್ರಕರ್ತರು ಮರೆಯುವಂತಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಣಸ ಜಾರಕಿಹೊಳಿ ಹೇಳಿದರು.ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ಗಿರೀಶ ಕೋಟೆ ಅವರಿಗೆ ಹಮ್ಮಿಕೊಂಡಿದ್ದ ಅಭಿಮಾನದ ಅಭಿವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿನ ಸಮಸ್ಯೆಗಳತ್ತ ಬೆಳಕು ಚೆಲ್ಲುವ ಕೆಲಸವಾಗಬೇಕು. ಮುಖ್ಯವಾಗಿ ಪತ್ರಿಕಾ ರಂಗದಲ್ಲಿ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸುವ ಕಾರ್ಯವಾಗಬೇಕೆಂದರು….

