ತೆಲಂಗಾಣದಲ್ಲಿ ಚನ್ನರಾಜ ಓಟ..!
ತೆಲಂಗಾಣ ವಿಧಾನಸಭೆ ಚುನಾವಣೆ ಕಾರ್ಯತಂತ್ರದಲ್ಲಿ ಚನ್ನರಾಜ ಹಟ್ಟಿಹೊಳಿ ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು….

