ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ
ಬೆಳಗಾವಿ,: ನಗರದ ಸ್ವಚ್ಛತೆ ಕಾಪಾಡಿ, ಹಿರಿಮೆ ಹೆಚ್ಚಿಸಲು ಪೌರ ಕಾರ್ಮಿಕರ ಪಾತ್ರ ಬಹಳಷ್ಟಿದೆ. ಅವರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಶೇಕಡಾ 70% ರಷ್ಟು ಪೌರ ಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಖಾಯಂಗೊಳಿಸಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಜ.02) ನಡೆದ…