Headlines

ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು

ದೇವಸ್ಥಾನ ಸ್ವಚ್ಛಗೊಳಿಸಿ ವಾಪಸ್ ಬರುವಾಗ ವಿದ್ಯುತ್ ಸ್ಪರ್ಶ

ಬೆಳಗಾವಿ:

ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41) ಎಂಬ ಮಹಿಳೆಯರು ಮೃತಪಟ್ಟಿದ್ದಾರೆ.

Oplus_131072

ದೇವಸ್ಥಾನದಲ್ಲಿ ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸ್ವಚ್ಛಗೊಳಿಸಿದ್ದರು. ದೇವಸ್ಥಾನವನ್ನು ನೀರಿನಿಂದ ತೊಳೆದು ಸ್ವಚ್ಛಗೊಳಿಸಿದ್ದರು. ಸ್ವಚ್ಛ ಮಾಡಿದ ನೀರಿನಲ್ಲಿ ವಿದ್ಯುತ್ ತಂತಿ ಕಟ್ ಆಗಿ ಕೆಳಕ್ಕೆ ಬಿದ್ದಿತ್ತು. ಎಲ್ಲ ಕೆಲಸ ಮುಗಿಸಿ ಹೊರಗೆ ಬರುವಾಗ ಕಬ್ಬಿಣದ ಗೇಟ್ ಹಾಕುವಾಗ ಓರ್ವ ಮಹಿಳೆಗೆ ವಿದ್ಯುತ್ ಸ್ಪರ್ಶವಾಗಿದೆ. ಕೂಡಲೇ ಈಕೆಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ವಿದ್ಯುತ್ ತಗುಲಿದೆ.

ವಿದ್ಯುತ್ ಸ್ಪರ್ಶಗೊಂಡು ಸವಿತಾ ಒಚಿಟಿ ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ ಕಲಾವತಿ ವಿದರವಾಡಿಯನ್ನು ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರಾವಣ ಸೋಮವಾರದಂದು ಇಡೀ ಗ್ರಾಮದಲ್ಲಿ ವಾರ ಬಿಡುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಶ್ರಾವಣ ಮಾಸದ ಮೊದಲ ದಿನವೇ ಈ ಅವಘಡ ಸಂಭವಿಸಿದ್ದರಿಂದ ಗ್ರಾಮದಲ್ಲಿ ದುಃಖದ ಮಡವಿನಲ್ಲಿ ಮುಳುಗಿದೆ. ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದು, ಮಕ್ಕಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!