ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ನಲ್ಲಿ ಕೋಟ್ಯಂತರ ರೂ. ಅವ್ಯವಹಾರ
14 ಆರೋಪಿಗಳ ಆಸ್ತಿ ಮುಟ್ಟುಗೋಲು: ಎಸ್ಪಿ ಗುಳೇದ್
ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದರು.
ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನ್ ಈ ಅವ್ಯವಹಾರದದ 14 ಆರೋಪಿಗಳ ಪೈಕಿ ಐವರು ಬ್ಯಾಂಕ್ ಸಿಬ್ಬಂದಿಗಳೇ ಆಗಿದ್ದು, ಅದರಲ್ಲಿ ಸಾಗರ ಹನಮಂತ ಸಬಕಾಳೆ ಮುಖ್ಯ ಆರೋಪಿಯಾಗಿದ್ದಾನೆ ಎಂದರು.

ಬ್ಯಾಂಕಿನಲ್ಲಿ ನಡೆದ ಒಟ್ಟು 74.86 ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕಣದಲ್ಲಿ ಒಟ್ಟು 14 ಜನರ ಭಾಗಿಯಾಗಿದ್ದು ಈಗ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಬ್ಯಾಂಕ್ ಅವ್ಯಹಾರದಲ್ಲಿ ಸಾಗರ ಸಬಕಾಳೆ ಎ1 ಆರೋಪಿಯಾಗಿದ್ದು, ಈತನ ಆಸ್ತಿ ಮೌಲ್ಯ 6. 97 ಕೋಟಿ ರೂ. ಠೇವಣಿಯಿಟ್ಟು ಬೇರೆ ಬೇರೆಯವರ ಹೆಸರಿನಲ್ಲಿ 81 ಕೋಟಿ ರೂ. ಲೋನ್ ಪಡೆದಿದ್ದಾನೆ ಎಂದು ಹೇಳಿದರು.
ಮಹಾಲಕ್ಷ್ಮೀ ಬ್ಯಾಂಕಿನ ವಹಿವಾಟು ನಾಲ್ಕು ಬಾರಿ ಅಡಿಟ್ ಆಗಿದೆ. ಆದರೂ ಕೂಡ ಈ ಅವ್ಯವಹಾರದ ಬಗ್ಗೆ ಸಣ್ಣ ಅಂಶವನ್ನೂ ಕಂಡು ಹಿಡಿಯಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದರು.
ಈ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಯೂ ಸೇರಿ ಒಟ್ಟು 14 ಆರೋಪಿಗಳ ಸುಮಾರು 112 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ. ಈ ಆಸ್ತಿಯ ಒಟ್ಟು ಸರ್ಕಾರಿ ಮೌಲ್ಯ 13.17 ಕೋಟಿ ರೂ.ಗಳಿದ್ದು, ಮಾರ್ಕೆಟ್ ಮೌಲ್ಯ 50 ಕೋಟಿ ರೂ.ಗಳಷ್ಟಿದೆ ಎಂದು ವಿವರಿಸಿದರು.
2021ರಿಂದ 2024ರವರೆಗೆ ಹನ್ನೊಂದು ಆರೋಪಿಗಳು ಈ ಬ್ಯಾಂಕಿನಲ್ಲಿ ಆರು ಕೋಟಿ ರೂ.ಗಳ ಠೇವಣಿಯಿಟ್ಟು ಬೇರೆ ಬೇರೆಯವರ ಹೆಸರಿನಲ್ಲಿ ಬ್ಯಾಂಕ್ ನಲ್ಲಿ 81 ಕೋಟಿ ಸಾಲ ಪಡೆದಿದ್ದಾರೆ. ಒಟ್ಟಾರೆಯಾಗಿ ಹದಿನಾಲ್ಕು ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.
ಬಾಕ್ಸ್…..
ಆರೋಪಿಗಳ ಪತ್ತೆ ಏಳು ತಂಡ ರಚನೆ….
ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರ ಪ್ರಕರಣ ಬೇಧಿಸಲು ಪೊಲೀಸ್ ಇಲಾಖೆಯಿಂದ ಏಳು ತಂಡ ರಚನೆ ಮಾಡಲಾಗಿತ್ತು. ಸದ್ಯ ಬ್ಯಾಂಕಿನಲ್ಲಿ ಅವ್ಯವಹಾರ ಮಾಡಿದ 11 ಆರೋಪಿಗಳ ಬಂಧನಕ್ಕೆ ಈಗಾಗಲೇ ಬಲೆ ಬೀಸಲಾಗಿದೆ. ಬ್ಯಾಂಕಿನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಹಣ ಮರಳಿ ಕೊಡುವ ಕುರಿತು ಬ್ಯಾಂಕಿನ ಆಡಳಿತ ಮಂಡಳಿ ನಿರ್ಧರಿಸಲಿದ್ದಾರೆ.
-ಡಾ.ಭೀಮಾಶಂಕರ ಗುಳೇದ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು