
ಬಾರದ ಲೋಕಕ್ಕೆ ಎಸ್ ಎಂ ಪಯಣ..!
ಬೆಂಗಳೂರು: ಮಾಜಿ ಮುಖ್ಯಮಂತ್ರಿS M. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿಯಾಗಿ ನೀರಾವರಿ ಯೋಜನೆಗಳು, ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಗಾಲ, ಡಾ. ರಾಜಕುಮಾರ್ ಅಪಹರಣ, ಕಾವೇರಿ ಗಲಾಟೆಯಂತಹ ಸವಾಲುಗಳನ್ನು ದಿಟ್ಟವಾಗಿ ಎದುರಿಸಿದ್ದರು. ರಾಜಕೀಯದಲ್ಲಿ ಎಸ್.ಎಂ. ಕೃಷ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಜೀವನ ಕುರಿತಾಗಿ 6 ಕೃತಿಗಳು ರಚನೆಯಾಗಿವೆ….