Headlines

10 ದಿನದಲ್ಲಿ ಹಾಲು ಪೂರೈಕೆದಾರರಿಗೆ ಬಿಲ್‌ ಪಾವತಿ- ಬಾಲಚಂದ್ರ

10 ದಿನದಲ್ಲಿ ಹಾಲು ಪೂರೈಕೆದಾರರಿಗೆ ಬಿಲ್‌ ಪಾವತಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಬೆಮೂಲ್‌ ತನ್ನ ಹಾಲು ಉತ್ಪಾದಕ ಸದಸ್ಯರ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಿ, ಉತ್ಪಾದಿತ ಗುಣಮಟ್ಟದ ಹಾಲಿಗೆ ನಿರಂತರ ಮಾರುಕಟ್ಟೆ ದೊರಕಿಸುವ ಮೂಲಕ ತಕ್ಕ ಪ್ರತಿಫಲ ನೀಡಲಾಗುವುದು. ಅಲ್ಲದೆ, ಹಾಲು ಪೂರೈಕೆದಾರರಿಗೆ 10 ದಿನದಲ್ಲಿ ಬಿಲ್‌ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ…

Read More

ಪೌರ ಕಾರ್ಮಿಕ ದಿನದಂದೇ ಪ್ರತಿಭಟನೆ ನಡೆಸಿದ ಕಾರ್ಮಿಕರು

ಖಾಯಂಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನೆಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿರುವ 100 ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಸೋಮವಾರ ಬೆಳಿಗ್ಗೆ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.ಪೌರ ಕಾರ್ಮಿಕರ ದಿನಾಚರಣೆಯಂದೇ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪಾಲಿಕೆಗೆ ಮುತ್ತಿಗೆ ಹಾಕಿದ ಪೌರಕಾರ್ಮಿಕರು ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು.ಹಲವು ಬಾರಿ ಮನವಿ ಅರ್ಪಿಸಿದರೂ ಕೂಡ ಪಾಲಿಕೆಯಲ್ಲಿನ ನೂರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತಿಲ್ಲ. ಈ ಬಗ್ಗೆ ಸರ್ಕಾರ ಖಾಯಂಗೊಳಿಸಬೇಕೆಂದು ಆದೇಶ ನೀಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ…

Read More

ಕಾಂಗ್ರೆಸ್‌ನಲ್ಲಿ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಪಕ್ಷ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿ ಸಮನ್ವಯ ಕೊರತೆಯೇ ಇಲ್ಲವೇ ಇಲ್ಲ. ಪಾರ್ಟಿ ಬಂದರೆ ಎಲ್ಲವೂ ಒಂದೇ. ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಎಲ್ಲರಿಗೂ ಟೈಮ್ ಬಂದೆ ಬರುತ್ತದೆ. ಸರಿಯಾದ ಸಮಯಕ್ಕೆ…

Read More

ನಂದಿನಿ ತುಪ್ಪಕ್ಕೆ ಭಾರೀ ಬೇಡಿಕೆ- ಬಾಲಚಂದ್ರ

ಬೆಳಗಾವಿತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ ಟ್ರಸ್ಟ್‌ ಚೇರಮನ್‌ ಬದಲಾವಣೆ ಆಗಿದ್ದರಿಂದ ತುಪ್ಪಕ್ಕಾಗಿ ಟೆಂಡರ್‌ ಕರೆದು…

Read More

14 ಆರೋಪಿಗಳ ಆಸ್ತಿ ಮುಟ್ಟುಗೋಲು:

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ14 ಆರೋಪಿಗಳ ಆಸ್ತಿ ಮುಟ್ಟುಗೋಲು: ಎಸ್ಪಿ ಗುಳೇದ್ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದರು.ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನ್ ಈ ಅವ್ಯವಹಾರದದ 14 ಆರೋಪಿಗಳ ಪೈಕಿ ಐವರು ಬ್ಯಾಂಕ್ ಸಿಬ್ಬಂದಿಗಳೇ ಆಗಿದ್ದು,…

Read More

ಬೆಳಗಾವಿಯಲ್ಲಿ ಮೇಗಾ ಡೇರಿ ಸ್ಥಾಪನೆ- ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಮೇಗಾ ಡೇರಿ ಸ್ಥಾಪನೆ- ಬೆಮೂಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ:ಬೆಳಗಾವಿಯಲ್ಲಿ ಅತ್ಯುನ್ನತ ತಂತ್ರಜ್ಞಾನವುಳ್ಳ ಮೇಗಾ ಡೇರಿ ನಿರ್ಮಿಸುವ ಮೂಲಕ ಜಿಲ್ಲೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದ ಕೆಪಿಟಿಸಿಎಲ್‌ ಸಭಾಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅ‍ವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟ ಸುಧಾರಣೆಗೆ ಸಂಕಲ್ಪ ಮಾಡಿದ್ದೇನೆ….

Read More

ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ: 3 ನಿರ್ಣಯ ಅಂಗೀಕಾರ

ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ:3 ನಿರ್ಣಯ ಅಂಗೀಕಾರ: ಬೆಳಗಾವಿ:ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸುವ ನಿಟ್ಟಿನಲ್ಲಿ ನಗರದಲ್ಲಿ ರವಿವಾರ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮೂರು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್, ನ್ಯಾಯಪೀಠ ಕೂಡಲಸಂಗಮ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ನಿರ್ಣಯ ಮಂಡಿಸಿದರು.ಹಿಂದುಳಿದ ವರ್ಗಗಳ ಆಯೋಗದಿಂದ ಪೂರ್ಣ…

Read More

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆ ಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧ

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧಬೆಳಗಾವಿ.ಪಂಚಮಸಾಲಿಗೆ 2 ಎ ಮೀಸಲಾತಿ ಕೊಡದಿದ್ದರೆ ಮುಂಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳನ್ನು ಸೌಧದೊಳಗೆ ಬಿಟ್ಟುಕೊಡುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದಲ್ಲಿ ಪಂಚಮಸಾಲಿ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ಈ ಸಲದ ಹೋರಾಟ ಕೊನೆಯದಾಗಬೇಕು. ಬರುವ ಅಧಿವೇಶನದೊಳಗೆ ಮೀಸಲಾತಿ ಕೊಡದಿದ್ದರೆ ಉಗ್ರ ಸ್ವರೂಪಗ ಹೋರಾಟಕ್ಕೆ ಸಿದ್ಧರಾಗಬೇಕೆಂದು ಅವರು ಕರೆ ನೀಡಿದರು. ಈ ಸಲದ ಹೋರಾಟದಲ್ಲಿ ಯಾರೂ ಬರೀ ನಾಟಕ ಮಾಡುವಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುರುಬರನ್ನು ಪರಿಶಿಷ್ಟ…

Read More

ದಾರಿ ತಪ್ಪಿದ ಪಾಲಿಕೆಯಲ್ಲಿ ಆನೆ ನಡೆದಿದ್ದೇ ದಾರಿ..!

ಅಧಿಕಾರಿಗಳ ಯಡವಟ್ಟು.ತಲೆಬಾಗಿದ ಮಹಾನಗರ ಪಾಲಿಕೆ. ಪಾಲಿಕೆ ಕೌನ್ಸಿಗಿಟ್ಟಿಲ್ಲ ಕಿಮ್ಮತ್ತು. ಆಡಳಿತ ಮತ್ತು ವಿರೋಧ ಪಕ್ಷದಲ್ಲಿಲ್ಲ ತಾಳಮೇಳ. ಆನೆ ನಡೆದಿದ್ದೇ ದಾರಿಯಂತಾಗುತ್ತಿದೆ ಪಾಲಿಕೆ ಆಡಳಿತ. ಆಡಳಿತಾತ್ಮಕ ಸಭೆ ಕರೆಯುವುದನ್ನೇ ಮರೆತವರು ಯಾರು? ಶಾಸಕರ ಮಾತು ಮೀರಿ ಹೊರಟ್ರಾ ನಗರಸೇವಕರು ಇ ಬೆಳಗಾವಿ ವಿಶೇಷಬೆಳಗಾವಿ.ಒಂದಾನೊಂದು ಕಾಲದಲ್ಲಿ ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಎಂದರೆ ಇಡೀ ರಾಜ್ಯದ ಜನ ತಿರುಗಿ ನೋಡುತ್ತಿದ್ದರು, ಅಂದರೆ ಅದಕ್ಕೊಂದು ವರ್ಚಸ್ಸು ಇತ್ತು, ಘನತೆ ಗೌರವವೂ ಇತ್ತು,ವಿಜಯ ಮೋರೆ ಮೇಯರ್ ಆಗಿದ್ದ ಸಂದರ್ಭದಲ್ಲಿ ಪಾಲಿಕೆ ಸಭೆಯಲ್ಲಿ ಗಡಿ…

Read More

ಪ್ಯಾಲಿಸ್ಟೈನ್ ಧ್ವಜ ಮಾದರಿ ಪೆಂಡಾಲ್ ತೆರವು…!

ಪೊಲೀಸರ ಸಕಾಲಿಕ ಮಧ್ಯಪ್ರವೇಶ. ತಣ್ಣಗಾದ ವಿವಾದ ಬೆಳಗಾವಿ.ಬೆಳಗಾವಿಗೂ ಹಬ್ಬಿದ ಪ್ಯಾಲಿಸ್ಟೈನ್ ಧ್ವಜ ವಿವಾದವನ್ನು ಪೊಲೀಸರ ಸಕಾಲಿಕ‌ ಕ್ರಮದಿಂದ ತಣ್ಣಗಾದಂತೆ ಕಾಣುತ್ತಿದೆ. ನಾಳೆ ನಡೆಯುವ ಈದ್ ಮೆರವಣಿಗೆಯ ಹಿನ್ನೆಲೆಯಲ್ಲಿಬೆಳಗಾವಿಯಲ್ಲಿ ಪ್ಯಾಲಿಸ್ಟೈನ್ ಧ್ವಜದ ಮಾದರಿಯ ಪೆಂಡಾಲ್ ಅಳವಡಿಸಲಾಗಿತ್ತು.ಆದರೆ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಅದನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ.

Read More
error: Content is protected !!