Headlines

ಮೂಢನಂಬಿಕೆಗೆ ಪುತ್ರಿಯರ ಕೊಲೆ ಮಾಡಿದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ

ಮೂಢನಂಬಿಕೆಗೆ ಪುತ್ರಿಯರ ಕೊಲೆ ಮಾಡಿದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆಬೆಳಗಾವಿ: ಮೂಢನಂಬಿಕೆಗೆ ಮರುಳಾಗಿ ತನ್ನ ಇಬ್ಬರು ಪುತ್ರಿಯರನ್ನು ಅಮಾನುಷವಾಗಿ ಕೊಲೆಮಾಡಿದ ಪಾಪಿ ಅಪ್ಪನಿಗೆ ೬ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ, ಬೆಳಗಾವಿ ನ್ಯಾಯಾಲಯಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ:ಬೆಳಗಾವಿಯ ಎ.ಪಿ.ಎಂ.ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಂಗ್ರಾಳಿ ಕೆ.ಎಚ್ವಾಸಿಯಾದ ಆರೋಪಿ ಅನೀಲ ಚಂದ್ರಕಾಂತ ಬಾಂದೇಕರ ಈತನು ತನ್ನ ಮನೆ ಮಾರಾಟ ಮಾಡಲು ಖರೀದಿಗೆ ಯಾರು ಬರದ ಕಾರಣಕ್ಕೆ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದ. ಅಂದು…

Read More

ಬೆಳಗಾವಿ ಪಾಲಿಕೆಗೆ ನೋಟೀಸ್ ಜಾರಿ

ದಾರವಾಡ,. ಬೆಳಗಾವಿ ಭೂ ಬಾಡಿಗೆ ವಸೂಲಾತಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ಬೆಳಗಾವಿ ಪಾಲಿಕೆಗೆ ನೋಟೀಸ್ ನೀಡಿ ವಿಚಾರಣೆಯನ್ನು ಶುಕ್ರವಾರ ಮುಂದಕ್ಕೆ ಹಾಕಿದೆ . ಸಧ್ಯ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಙತೆ ನ್ಯಾಯಕೋರಿ ಹಿಂದಿನ ಗುತ್ತಿಗೆದಾರ ಹೊರಟ್ಡಿ ಎಂಬುವರು ಹೈ ಕೋರ್ಟ ಮೆಟ್ಟಿಲು ಹತ್ತಿದ್ದರು. ಇಂದು ಪ್ರಕರಣಕ್ಕೆ ಸಂಬಂಧಿಸಿದಙತೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಇದೇ ಶುಕ್ರವಾರ ಬೆಳಿಗ್ಗೆ 10 ಕ್ಕೆ ದಾಖಲಾತಿಯೊಂದಿಗೆ ಹಾಜರಾಗಲು ಸೂಚನೆ ನೀಡಿದ್ದಾರೆ.. ಕಳೆದ ದಿನ‌ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಗುತ್ತಿಗೆದಾರ ಹೊರಟ್ಟಿ…

Read More

ಅಥಣಿಯಲ್ಲಿ ಡಬಲ್ ಮರ್ಡರ್.

ಬೆಳಗಾವಿ- ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರೂ ಮೃತಪಟ್ಟ ಘಟನೆ ಅಥಣಿ ತಾಲುಕಿನಲ್ಲಿ ನಡೆದಿದೆ. ಹಣಮಂತ ರಾಮಚಂದ್ರ ಖೋತ ( 34) ಮತ್ತು ಖಂಡೂಬಾ ತಾನಾಜಿ ಖೋತ ( 32) ಮೃತಪಟ್ಟವರು ಇಬ್ಬರೂ ಅಥಣಿ ತಾಲ್ಲೂಕಿನ ಖೋತವಾಡಿ ಗ್ರಾಮದವರು. ಜಮೀನಿಗೆ ಸಂಭಂಧಿಸಿದಂತೆ ಇಬ್ಬರ ನಡುವೆ ಹಲವಾರು ದಿನಗಳಿಂದ ವಿವಾದ ನಡೆದಿತ್ತು, ಗ್ರಾಮದ ಹಿರಿಯರೂ ರಾಜಿ ಪಂಚಾಯತಿ ಮಾಡಿಸಿ ರಾಜಿ ಸಂಧಾನ ಮಾಡಿಸಿದ್ರರು. ಆದರೂ ಸಹ ನಿನ್ನೆ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು…

Read More

ಪೌರ ಕಾರ್ಮಿಕರಿಗೆ ರೇನ್ ಕೋಟ್ ವಿತರಣೆ

ಬೆಳಗಾವಿ. ಮಳೆಗಾಲದಲ್ಲಿ ಕೆಲಸ ನಿರ್ವಹಿಸಲು ಯಾವುದೇ ರೀತಿಯ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ರೇನ್ ಕೋಟ್ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕರಾದ ವಾಣಿ ವಿಲಾಸ ಜೋಶಿ ಮತ್ತು ಅಭಿಜುತ್ ಜವಳಕರ ಅವರು ಈ ರೇನ್ ಕೋಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆಯ ಅನಿಲ ಬೋರಗಾವಿ ಶಿಂಧೆ ಮತ್ತಿತರರು ಹಾಜರಿದ್ದರು.

Read More

ಕೇಂದ್ರ ಬಜೆಟ್ ನಲ್ಲೇನಿದೆ ಗೊತ್ತಾ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದೆ. 6 ಬಾರಿ ಪೂರ್ಣಾವಧಿ ಹಾಗೂ ಒಂದು ಬಾರಿ ಮಧ್ಯಂತರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದಾರೆ. ಬಜೆಟ್‌ ಪ್ರಮುಖ ಅಂಶಗಳು ಇಲ್ಲಿವೆ *1.52 ಲಕ್ಷ ಕೋಟಿ ರೂ. ಹಣ ಕೃಷಿ ವಲಯಕ್ಕೆ ಮೀಸಲು

Read More

ಕೇಂದ್ರ ಬಜೆಟ್- ರಾಜ್ಯದ ನಿರೀಕ್ಷೆ ಏನು?

ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಅತಿ ಹೆಚ್ಚು ಸ್ಥಾನ ನೀಡಿರುವ ಕರ್ನಾಟಕ, ಮೋದಿ 3ನೇ ಅವಧಿಯ ಮೊದಲ ಬಜೆಟ್‌ನತ್ತ ಆಸೆಗಣ್ಣಿನಿಂದ ನೋಡುತ್ತಿದೆ. ಹಾಗಾದರೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಇರುವ ನಿರೀಕ್ಷೆಗಳೇನು? ಇಲ್ಲಿದೆ ವಿವರ. ಬೆಂಗಳೂರು, ಜುಲೈ 23: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ….

Read More

ಮೂಡಾದಿಂದ ಸಿದ್ದು ಹೆಸರು ಹಾಳು- ಯತ್ನಾಳ

ಬೆಳಗಾವಿ ಸಿದ್ಧರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೆ ಗಳಿಸಿದ್ದ ಹೆಸರು, ಕೀರ್ತಿಯನ್ನು ಮುಡಾ ಹಗರಣದಲ್ಲಿ ಕಳೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳುದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮೂರು ಎಕರೆ ಜಮೀನಿಗಾಗಿ ಇಷ್ಟೊಂದು ಅವ್ಯವಹಾರ ನಡೆಸುವುದು ಅಗತ್ಯವಿರಲಿಲ್ಲ. ಈ ಬಗ್ಗೆಯೂ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಡೆಸುತ್ತೇವೆ. ಚರ್ಚೆ ನಡೆಸುತ್ತೇವೆ ಎಂದರು. ಬಿಜೆಪಿ ಸರ್ಕಾರ ಇದ್ದಾಗ ಇವರೇ 40 ಪರ್ಸೆಂಟ್ ಎಂದು ಆರೋಪಿಸಿದ್ದರು. ಚನಾವಣಾ ಪ್ರಚಾರ ಸಂದರ್ಭದಲ್ಲಿಯೂ ಈ ಬಗ್ಗೆ ಅಪಪ್ರಚಾರ…

Read More

ಸಿದ್ಧು ಪರಮ‌ ಭ್ರಷ್ಟ- ಜೋಶಿ ಆರೋಪ

ಬೆಳಗಾವಿ: ಕಾಂಗ್ರೆಸ್ ಪಕ್ಷಕ್ಕೆ ಹೋದ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್ ಡಿಎನ್ಎ ಸಂಪೂರ್ಣವಾಗಿ ಅಳವಡಿಸಿಕೊಂಡಿದ್ದು, ಪರಮ ಭ್ರಷ್ಟರಾಗಿ ಹೊರ ಹೊಮ್ಮಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ಮಾಡಿದರು.ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇರ ಹಸ್ತಕ್ಷೇಪ ಮತ್ತು ಆಶೀರ್ವಾದಿಂದ ವಾಲ್ಮೀಕಿ ನಿಗಮ ಮತ್ತು ಮುಡಾ ಎರಡೂ ಹಗರಣಗಳು ನಡೆದಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಿಬಿಐ ತನಿಖೆ ಎದುರಿಸಬೇಕು. ಶುದ್ಧಹಸ್ತರಾದರೆ ಮತ್ತೆ ಅವರನ್ನೆ ಬೇಕಾದರೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. ….

Read More

ಪಾರಸ ಸೌಹಾರ್ಧ ಸಂಘ ಉದ್ಘಾಟನೆ

ಬೆಳಗಾವಿ ಅನಗೋಳ ಮುಖ್ಯ ರಸ್ತೆಯಲ್ಲಿನ ಹರಿಮಂದಿರ ಎದುರಿನ ಮಾಲಿನಿ ಪ್ಲಾಜಾ ದಲ್ಲಿ ರವಿವಾರ ಪಾರಸ್ ಕೋ ಆಪರೇಟೀವ್ ಸೌಹಾರ್ದ ಸಹಕಾರಿ ಬ್ಯಾಂಕಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ, ಶಾಸಕ ಅಭಯ ಪಾಟೀಲ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಸೇರಿದಂತೆ ಮತ್ತಿತರರು ಇದ್ದರು.

Read More

ಚಿಕ್ಕೋಡಿಗೆ 60 ಕೋಟಿ ಅನುದಾನ ಕೊಡಿ

ಚಿಕ್ಕೋಡಿ ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ ಬೆಂಗಳೂರು: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯಾಗನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಸಲ್ಲಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚಿಸಿದ ಸಂಸದೆ…

Read More
error: Content is protected !!