ಲೋಕಸಭಾ ಚುನಾವಣೆ: ದೂರು ನಿರ್ವಹಣೆ, ಎಂಸಿಸಿ, ಸಿವಿಜಿಲ್ ಕೇಂದ್ರಗಳ ಸ್ಥಾಪನೆ
ಬೆಳಗಾವಿ, ಮಾ.23(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ….

