Headlines

ಬೆಂಬಲ ಬೆಲೆ ಕಾಯ್ದೆ ಜಾರಿ: CM

ಕೃಷಿಕರಿಗೆ ಕೃಷಿ ಸಲಕರಣೆಗಳ ವಿತರಣೆ ಬೆಂಬಲ ಬೆಲೆ ಕಾಯ್ದೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಳಗಾವಿ, “ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ‌ ಕೊಡುವುದು ಸರಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂ.ಎಸ್.ಪಿ. ಕಾಯ್ದೆ ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ(ಮಾ‌….

Read More

ಅಂಗಡಿ‌ ಕುಟುಂಬಕ್ಕೆ ನಡ್ಡಾ ಕೊಟ್ಟ ಸಂದೇಶ ಏನು?

ಬೆಳಗಾವಿ .ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಚಿಕ್ಕೋಡಿ ಮತ್ತು ಬೆಳಗಾವಿ ಸಭೆ ಮುಗಿಸಿ ಸಂಸದೆ ಅಂಗಡಿ ಮನೆಗೆ ಭೆಟ್ಟಿ ಕೊಟ್ಟು ನೀಡಿದ ಸಂದೇಶವಾದರೂ ಏನು? ಚಿಕ್ಕೋಡಿಯಲ್ಲಿ ಸಭೆ ಮುಗಿಸಿ ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಕೇವಲ ಅರ್ಧ ತಾಸಿನಲ್ಲಿ ಕಾರ್ಯಕಾರಿಣಿ ಸಭೆ ಮುಗಿಸಿ ಸಂಸದೆ ಅಂಗಡಿಯವರ ಮನೆಗೆ ನಡ್ಡಾ ಹೋದರು. ಸಹಜವಾಗಿ ಬೆಳಗಾವಿಗೆ ಬರುವ ಗಣ್ಯರು ಡಾ. ಪ್ರಭಾಕರ ಕೋರೆ ಮನೆಗೆ ಹೋಗುತ್ತಾರೆ. ಆದರೆ ಇಲ್ಲಿ ನಡ್ಡಾ ಅವಸರದಲ್ಲಿ ಅಂಗಡಿ ಮಬೆಗೆ ಹೋಗಿ ಏನು…

Read More

ಪಾಕ್ ಪರ ಇದ್ದವರನ್ನು ಯಾರೂ‌ ಕ್ಷಮಿಸಲ್ಲ

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾಬೆಳಗಾವಿ. :ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ…

Read More

ನಡ್ಡಾ ಅಧ್ಯಕ್ಷತೆಯಲ್ಲಿ ಹೈಲೆವೆಲ್ ಸಭೆ

ಬೆಳಗಾವಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರನ್ನು ಪಕ್ಷದ ಅಧ್ಕಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದರು‌. ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಜಿಲ್ಲೆಯ ನಾಯಕರೂ ಸಹ ಈ ಸಂದರ್ಭದಲ್ಲಿ ಹಾಜರಿದ್ದರು. ನಡ್ಡಾ ಅವರು ಚಿಕ್ಕೊಡಿಗೆ ತೆರಳಿ ಅಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವರು. ನಂತರ ಬೆಳಗಾವಿಯ ಕಾಕತಿಗೆ ಆಗಮಿಸಿ ಅಲ್ಲಿನ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳ…

Read More

ಬಿಜೆಪಿ ಟಿಕೆಟ್ಗೆ ರೈತರ ಡಿಮ್ಯಾಂಡ್

ರೈತ ಹೋರಾಟಗಾರೊಬ್ಬರಿಗೆ ಬಿಜೆಪಿ ಟಿಕೆಟ್ ಕೋಡಿ: ಪ್ರಕಾಶ ನಾಯಕ ಬೆಳಗಾವಿ:ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಒಂದು ಟಿಕೆಟ್ ರೈತ ಮುಖಂಡರಿಗೆ ನೀಡಬೇಕೆಂದು ಬೆಳಗಾವಿಗೆ ಬರುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಒತ್ತಾಯಿಸಲಾಗುವುದು ಎಂದು ರಾಷ್ಟ್ರೀಯ ರೈತರ ಸಂಘದ ಮುಖಂಡ ಪ್ರಕಾಶ ನಾಯಕ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೈತರು ಎಲ್ಲವನ್ನು ಹೋರಾಟದ ಮೂಲಕವೇ ಪಡೆಯುವ ಪರಿಪಾಟ ನಿರ್ಮಾಣವಾಗಿದೆ‌. ನಮ್ಮ ಹೋರಾಟಕ್ಕೆ ಅಷ್ಟು ಗಂಭೀರವಾಗಿ ಪ್ರತಿಕ್ರಯಿಸದ ಭ್ರಷ್ಟ ವ್ಯವಸ್ಥೆಯಿಂದ ರೈತ ಹೋರಾಟಗಾರರು ಸಂಸದ ಭವನದಲ್ಲಿರುವುದು ಅನಿವಾರ್ಯವಾಗಿದೆ ಎಂದರು….

Read More

ಲೋಕ ಸಮರಕ್ಕೆ ನಾನೂ ರೆಡಿ..!

BJP ಯಲ್ಲಿ ಹೆಚ್ಚಿದ ಪೈಪೋಟಿ., ಮೂವರು ಮಹಿಳೆಯರಿಂದ ಅರ್ಜಿ. ಹಾಲಿ ಸಂಸದೆ ಮಂಗಲಾ ಅಂಗಡಿ, ಮಾಜಿ ಸಂಸದ ರಮೇಶ ಕತ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನ್ಯಾಯವಾದಿ ವಿದ್ಯಾ ಪಾಟೀಲರಿಂದ ಅರ್ಜಿ. ಬೆಳಗಾವಿ. ಜಿಲ್ಲೆಯ ಬೆಳಗಾವಿ ಲೋಕಸಮರದಲ್ಲಿ ಆಖಾಡಕ್ಕಿಳಿಯಲು ಬಿಜೆಪಿ ಯಲ್ಲಿ ಭಾರೀ ಪೈಪೋಟಿ ಶುರುಚಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಳಗಾವಿಗೆ ಆಗಮಿಸುವ ಮುನ್ನಾ ದಿನವೇ ಆಕಾಂಕ್ಷಿಗಳು ತಮ್ಮ ಅರ್ಜಿಯನ್ನು ಪಕ್ಷದ ಜಿಲ್ಲಾಧ್ಯಕ್ಷರಿಗೆ ಇಂದು ಸಲ್ಲಿಸಿದ್ದಾರೆ. ನಗರದ ಖಾಸಗಿ ಹೊಟೇಲ ನಲ್ಲಿ‌…

Read More

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ವಿಠ್ಠಲ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರವಿವಾರದಂದು ಸಂಘದ ಸಭಾ ಗೃಹದಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಖಲೆ ಪ್ರಕಟಿಸಿದರು. ಈ…

Read More

ಬೆಳಗಾವಿಗೆ ನಾಳೆ ನಡ್ಡಾ

ಬೆಳಗಾವಿ. ಲೋಕಸಮರಕ್ಕೆ ದಿನಾಂಕ ಸನ್ನಿಹಿತ ವಾಗುತ್ತುರುವ ಸಂದರ್ಭದಲ್ಲಿ ನಾಳೆ ದಿ‌‌3 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ನಡ್ಡಾ ಬೆಳಗಾವಿಗೆ ಆಗಮಿಸಲಿದ್ದಾರೆ. ನಡ್ಡಾ ಅವರು ಪಕ್ಷದ ಬೂತ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಕೂಡ ಮಾಡಲಿದ್ದಾರೆ.

Read More

ಬೆಳಗಾವಿಗೆ ನುಗ್ಗಿದ ಕಾಡಾನೆ..

ಬೆಳಗಾವಿ ಇಂದು ಬೆಳ್ಳಂ ಬೆಳಗ್ಗೆ ಕಾಡಾನೆಯೊಂದು ಬೆಳಗಾವಿ ಮಹಾನಗರದ ಬಡಾವಣೆಗೆ ನುಗ್ಗಿದ ಘಟನೆ ಬೆಳಗಾವಿಯ ಬಾಟ್ ರಸ್ತೆಯ ಬಸವ ಕಾಲನಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಕಾಡಾನೆ, ಬೆಳಗಾವಿಯ ಬಸವ ಕಾಲೋನಿಯಲ್ಲಿ ಕಾಣಿಸಿಕೊಂಡಾಗ,ಅಲ್ಲಿಯ ಕೆಲವರಿಗೆ ಖುಷಿ,ಇನ್ನು ಕೆಲವರಿಗೆ ಹೆದರಿಕೆ, ಆನೆ ಬಂದಿದೆ ಆನೆ,ಎನ್ನುವ ಸುದ್ದಿ ಹರಡಿ ಅಲ್ಲಿ ನೂರಾರು ಜನ ಸೇರಿದ್ರು.ಸೆಲ್ಸಿ,ಮೋಬೈಲ್ ಶೂಟೀಂಗ್ ಮಾಡಿ ಅಲ್ಲಿಯ ಜನ ಎಂಜಾಯ್ ಮಾಡಿದ್ರು. ಕಾಡಾನೆ ಬಡಾವಣೆಗೆ ಬಂತಲ್ಲ ಎಂದು ಅಲ್ಲಿಯ ಕೆಲವು ಜನ ಹೆದರಿ ಫಾರೆಸ್ಟ್ ಆಫೀಸರುಗಳಿಗೆ ಫೋನ್ ಮಾಡಿದ್ರು…

Read More

ಮಹಾರಾಷ್ಟ್ರ ಫಲಕ ತೆರವು-

ಬೆಳಗಾವಿ. ಕನ್ನಡಿಗರ ಹೋರಾಟಕ್ಕೆ ಮಣಿದ ಬೆಳಗಾವಿ ಮಹಾನಗರ ಪಾಲಿಕೆ ಅನಗೋಳ ದಲ್ಲಿರುವ ಜೈ ಮಹಾರಾಷ್ಟ್ರ ನಾಮಫಲಕವನ್ನು ತೆರವುಗೊಳಿಸಿತು. ಇಂದು ಬೆಳಿಗ್ಗೆಯಷ್ಟೇ ಕನ್ನಡ ಪರ ಸಂಘಟನೆಗಳು ಪಾಲಿಕೆ ಆಯುಕ್ತರ ಕಾರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದವು‌ . ಅಷ್ಟೇ ಅಲ್ಲ ಆಯುಕ್ತರಿಗೆ ಧಿಕ್ಕಾರ ಸಹ ಹೇಳಿದ್ದರು. ಇದಾದ ನಂತರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಆಯುಕ್ತ ಲೋಕೇಶ್ ಅವರು ಆ ಫಲಕ ತೆರವಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತಿಯಲ್ಲಿ ಫಲಕ ತೆರವುಗೊಳಿಸಕಾಯಿತು.

Read More
error: Content is protected !!