MAYOR ELECTION ಸೋಮವಾರ ಮುಹೂರ್ತ ಫಿಕ್ಸ್..!

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು‌ ಉಪಮೇಯರ್ ಚುನಾವಣೆಗೆ ಸೋಮವಾರ ಮುಹೂರ್ತ ಫಿಕ್ಸ್‌ ಆಗಲಿದೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಸೋಮವಾರ ಚುನಾವಣೆ ಸಂಬಂಧ ದಿನಾಂಕವನ್ನು ಅಂದೇ‌ ನಿಗದಿ ಮಾಡಲಿದ್ದಾರೆ ಈಗಿನ‌ ಬಿಜೆಪಿ ಮೇಯರ್ ಅವಧಿ ಇದೇ ದಿ. 6 ಕ್ಕೆ ಮುಕ್ತಾಯಗೊಳ್ಳಲಿದೆ. ಸಧ್ಯ ಮೇಯರ್ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಮೇಯರ್ ಸ್ಥಾನ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮತ್ತು ಉಪಮೇಯರ್ ಸ್ಥಾನ‌ ದಕ್ಷಿಣ ಕ್ಷೇತ್ರಕ್ಕೆ ಹೋಗಲಿದೆ….

Read More

ರಾಜ್ಯಪಾಲರ ಹಠಾತ್ ರಾಜೀನಾಮೆ..!

ದಿಢೀ‌ರ್ ರಾಜೀನಾಮೆ ನೀಡಿದ ರಾಜ್ಯಪಾಲರು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ಇಂದು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ವೈಯಕ್ತಿಕ ಕಾರಣಗಳು ಮತ್ತು ಇತರೆ ಕಾರಣಗಳಿಂದ ಪದವಿ ತೊರೆಯುತ್ತಿದ್ದೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ದಯಮಾಡಿ ನನ್ನ ರಾಜೀನಾಮೆ ಪತ್ರವನ್ನು ಸ್ವೀಕರಿಸಿ, ಅಂಗೀಕರಿಸಬೇಕೆಂದು ರಾಷ್ಟ್ರಪತಿ ದೌಪದಿ ಮುರ್ಮು ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ವೇಳೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಸ್ಥಾನದಿಂದಲೂ ತಮ್ಮನ್ನು ಬಿಡುಗಡೆ ಮಾಡಿ ಎಂದು ಕೋರಿದ್ದಾರೆ.

Read More

ದತ್ತು ಸ್ವೀಕಾರ: ದಂಪತಿಗೆ ಮಗು ಹಸ್ತಾಂತರಿಸಿದ ಸಚಿವೆ

ದತ್ತು ಸ್ವೀಕಾರ: ದಂಪತಿಗೆ ಮಗು ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಇಲ್ಲಿಯ ಸ್ವಾಮಿ ವಿವೇಕಾನಂದ ದತ್ತು ಸ್ವೀಕಾರ ಕೇಂದ್ರದ ಅಭಿರಕ್ಷಣೆಯಲ್ಲಿ ಇದ್ದ ಮಗುವನ್ನು CARA ನಿಯಮಗಳಂತೆ ಆಯ್ಕೆಯಾದ ದಂಪತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಹಸ್ತಾಂತರಿಸಿದರು. ಕೇರಳ ರಾಜ್ಯದ ದತ್ತು ಪೋಷಕರಿಗೆ ಮೂರುವರೆ ತಿಂಗಳ ಗಂಡು ಮಗುವನ್ನು ಹಸ್ತಾಂತರಿಸಿದ ಸಚಿವರು, ಮಗುವನ್ನು ಅತ್ಯಂತ ಕಾಳಜಿಯಿಂದ ಸಾಕಿ ಸಲಹುವಂತೆ ವಿನಂತಿಸಿದರು. ಮಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More

ಬಿಜೆಪಿಗಿಂತ ಕಾಂಗ್ರೆಸ್ ನಲ್ಲೇ ಹೆಚ್ಚು ಭ್ರಷ್ಟಾಚಾರ

ಕಾಂಗ್ರೆಸ್ ಸರ್ಕಾರದಲ್ಲೇ ಅತೀ ಹೆಚ್ಚು ಲಂಚಾವತಾರ. ಅವರದ್ದೇ ಪಕ್ಷದ ಶಾಸಕ ಶಿವರಾಂ‌ ಆರೋಪ. ಬೆಂಗಳೂರು:ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಅತೀ ಹೆಚ್ಚು ಕಮೀಶನ್ ದಂಧೆ ನಡೆಯುತ್ತಿದೆ.ಇಂತಹ ಗಂಭೀರ ಆರೋಪವನ್ನು ಬಿಜೆಪಿಯವರೇ ಮಾಡಿದ್ದರೆ ರಾಜಕೀಯ ಎಂದು ತಳ್ಳಿಹಾಕಬಹುದು.ಆದರೆ ಇಲ್ಲಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ‌ ಮಾಡಿದ್ದು ಅವರದ್ದೇ ಪಕ್ಷದ ಶಾಸಕ ಶಿವರಾಂ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40% ಕಮೀಷನ್ ದಂಧೆ ನಡೆಯುತ್ತಿದೆ ಎಂಬುದಾಗಿ ನಾವೇ ಹೇಳುದ್ದೇವು.. ಈಗ ನಮ್ಮದೇ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚು ಕಮೀಷನ್ ದಂಧೆ ನಡೆಯುತ್ತಿದೆ. ಇದನ್ನ ನಾನು…

Read More

800 ಕೋಟಿ ರೂ ಪ್ರಸ್ತಾವನೆಗೆ ಒಪ್ಪಿಗೆ

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ : 800 ಕೋಟಿ ರೂ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಡಿಸಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಮಾರು 800 ಕೋಟಿ ರೂ.ಗಳ ಪ್ರಸ್ತಾವನೆಗೆ ಸಚಿವಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಮೂಜುರು ನೀಡಲಾಯಿತು. ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ 519.10…

Read More

ಶಾಂತಾರಾಮ ಹೆಗಡೆ ಇನ್ನಿಲ್ಲ..

ಶಿರಸಿ.ಸಹಕಾರಿ ಮತ್ತು‌ ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದ ಶಾಂತಾರಾಮ ಹೆಗಡೆ ಶೀಗೆಹಳ್ಖಿ ಅವರು ನಿಧನರಾಗಿದ್ದಾರೆ. . ಸರಳ ಮತ್ತು ಸಜ್ಜನ ವ್ಯಕ್ತಿಯಾಗಿದ್ದ ಶಾಂತರಾಮ್ ಹೆಗಡೆಯವರು ಸಹಕಾರಿ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಮಾಡಿದ್ದಾರೆ. ಮೃತರ ನಿಧನಕ್ಕೆ ಅಖಿಲ ಕರ್ನಾಟಕ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಸಂತಾಪ ವ್ಯಕ್ತ ಪಡಿಸಿದ್ದಾರೆ.

Read More

ಫೆ.4ರಂದು ಬೃಹತ್ ಜನ ಜಾಗೃತಿ ಸಮಾವೇಶ:

ಅಂಬಿಗರ ಚೌಡಯ್ಯನವರ 904ನೇ ಜಯಂತಿ ಆಚರಣೆ. ಫೆ.4ರಂದು ಬೃಹತ್ ಜನಜಾಗೃತಿ ಸಮಾವೇಶ: ಸಾಯಬಣ್ಣಾ ತಳವಾರ ಬೆಳಗಾವಿ: ನಿಜಶರಣ ಅಂಬಿಗರ ಚೌಡಯ್ಯ ನವರ 904ನೇ ಜಯಂತಿ ನಿಮಿತ್ತ ಫೆ. 4ರಂದು ನಗರದ ಸರ್ದಾ‌ರ್ ಮೈದಾನದಲ್ಲಿ ಬೃಹತ್ ಜನಜಾಗೃತಿ ಸ್ವಾಭಿಮಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೋಳಿ-ಬೆಸ್ತ ಸಮಾಜದ ಸಂಘದ ಜಿಲ್ಲಾ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸಾಯಿಬಣ್ಣ ತಳವಾರ ತಿಳಿಸಿದರು.ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 4ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ಬರ ನಿರ್ವಹಣೆಗೆ ಸಿದ್ಧತೆ

ಜಿಲ್ಲೆಯ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಬರ ನಿರ್ವಹಣೆ: ಅಗತ್ಯ ಸಿದ್ಧತೆಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ಬೆಳಗಾವಿ, ಜ.31(ಕರ್ನಾಟಕ ವಾರ್ತೆ): ಕುಡಿಯುವ ನೀರು ಕೊರತೆ ಕಂಡುಬಂದಾಗ ತಕ್ಷಣವೇ ನೀರು ಪೂರೈಸಲು ಅನುಕೂಲವಾಗುವಂತೆ ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಮುಂಚಿತವಾಗಿಯೇ ಒಪ್ಪಂದ ಮಾಡಿಕೊಳ್ಳಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಒಂದು ಸಮಿತಿಯನ್ನು ರಚಿಸಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ(ಜ.31) ನಡೆದ ಕಂದಾಯ…

Read More

ಬೆಳಗಾವಿಯ ಬಡಿಗೇರಗೆ ಒಲಿದ ಪ್ರಶಸ್ತಿ..!

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 12.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಶಶಿಕಾಂತ್ ಎಸ್.ಶಂಬಳ್ಳಿ, ಪ್ರಜಾವಾಣಿ, ಬೀದರ್ ಪ್ರಕಾಶ್ ಬಾಳಕ್ಕನವರ್,…

Read More

ಧರ್ಮಗಳನ್ನು ಗೌರವಿಸಿ

ಧರ್ಮಗಳನ್ನು ಗೌರವಿಸಿ, ಪ್ರೀತಿಸುವ ಭಾವನೆ ಬೆಳೆಸಿಕೊಳ್ಳಿ; ಕಾರಂಜಿಮಠದ ಗುರುಸಿದ್ದ ಶ್ರೀ ಸೌಹಾರ್ದ ಮಾನವ ಸರಪಳಿ ಅಭಿಯಾನಕ್ಕೆ ಕೈ ಜೋಡಿಸಿದ ನೂರಾರು ಜನರು ಬೆಳಗಾವಿ: ದೇಶದ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸೋಣ. ಧರ್ಮಗಳನ್ನು ಗೌರವಿಸಿ, ಪ್ರೀತಿಸುವ ಭಾವನೆಯನ್ನು ಬೆಳಿಸಿಕೊಂಡು ಒಗ್ಗಟ್ಟಾಗಿ ನಿಲ್ಲೋಣ. ಧರ್ಮಗಳ ಹೂದೋಟವಾಗಿರುವ ದೇಶದಲ್ಲಿ ಸೌಹಾರ್ದತೆಯಿಂದ ಬದುಕಿನ ಮಾತ್ರ ಪರಂಪರೆ ಬೇರು ಉಳಿಯಲು ಸಾಧ್ಯ ಎಂದು ಎಂದು ಕಾರಂಜಿಮಠದ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ‌ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಆಯೋಜಿಸಲಾದ ಸೌಹಾರ್ದ ಕರ್ನಾಟಕ ವೇದಿಕೆಯ ಮಹಾತ್ಮ ಗಾಂಧೀಜಿಯವರ…

Read More
error: Content is protected !!