“ಬೆಳಗಾವಿ: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು.
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು.

ಸನ್ಮಾನದ ವೇಳೆ ಹಿರಿಯ ಪತ್ರಕರ್ತರಾದ ನೌಷಾಧ ಬಿಜಾಪುರ, ರಾಜು ಗೌಳಿ, ಶ್ರೀಶೈಲ್ ಮಠದ, ಮಂಜುನಾಥ ಪಾಟೀಲ್, ಶ್ರೀಕಾಂತ ಕುಬಕಡ್ಡಿ, ಚಂದ್ರಕಾಂತ ಸುಗಂಧಿ, ಅನೀಲ ಕಾಜಗಾರ, ಶ್ರೀಧರ ಕೋಟಾರಗಸ್ತಿ, ಮೈಲಾರಿ ಪಠಾತ್, ಅಡವೆಪ್ಪ ಪಾಟೀಲ್, ಮೈಬೂಬ್ ಮಕನದಾರ, ಇಮಾಮ್ ಗೋಡೆಕರ್, ಸಿದ್ಧನಗೌಡ ಪಾಟೀಲ್, ಸುನೀಲ್ ಪಾಟೀಲ್, ಮುನ್ನಾ ಬಾಗವಾನ ಸೇರಿ ಹಲವು ಪತ್ರಕರ್ತರು ಉಪಸ್ಥಿತರಿದ್ದರು.

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮಾಜಿ ನಗರಸೇವಕಿ ಅನುಶ್ರೀ ದೇಶಪಾಂಡೆ ಮತ್ತು ಸರಳಾ ಹೆರೆಕರ ಅವರು ಸನ್ಮಾನಿಸಿದರು.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ನೂರಾರು ಮುಖಂಡರು ಹೂಗುಚ್ಛ ನೀಡಿ ಸತ್ಕರಿಸಿದರು.
ಲೋಕೋಪಯೋಗಿ ಇಲಾಖೆ ಸಚಿವ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಿದೆ.”