
ಬೆಳಗಾವಿ.
ಮಾಜಿ ಪ್ರಧಾನಿ ಅಟಲ್ ಜೀ ಅವರ ನೆನಪುಗಳ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಜಿಲ್ಲೆಯ 70 ಕ್ಕೂ ಹೆಚ್ಚು ಹಿರಿಯ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮ ಇಂದಿಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಆಯೋಜನೆ ಮಾಡಿದ್ದ ಈ ಕಾರ್ಯಕ್ರಮದಲ್ಲಿ ಎಲ್.ಇ.ಡಿ ಪರದೆ ಮೂಲಕ ಅಟಲ್ ಜೀ ರವರ ಬಾಲ್ಯಜೀವನ ದಿಂದ ರಾಜಕೀಯ ಜೀವನ ವರೆಗಿನ ಕಿರುಚಿತ್ರ ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ವಿರಾಸತ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿಯನ್ನು ಹಬ್ಬದಂತೆ ಆಚರಿಸುತ್ತೇವೆ ಅಂದರೆ, ಅದಕ್ಕೆ ಅವರ ಪರಿಶುದ್ಧವಾದ ವ್ಯಕ್ತಿತ್ವ ಕಾರಣ ಎಂದರು,

ಅಟಲ್ಜೀ ಅವರು ತಮ್ಮ ಮೌಲ್ಯಾಧಾರಿತ ರಾಜಕಾರಣ, ಮುತ್ಸದ್ದಿತನ, ದೂರದೃಷ್ಟಿಯಿಂದ ವಿಶಿಷ್ಟವಾಗಿ ನಿಲ್ಲುತ್ತಾರೆ. ದೇಶವೇ ಮೊದಲು ಎಂದು ನಂಬಿದ ತತ್ವಾದರ್ಶಕ್ಕೆ ಬದ್ಧರಾಗಿ ಅವರು ರಾಜಕಾರಣ ನಡೆಸಿದವರು. ಎಂದು ಶೆಟ್ಟರ್ ಹೇಳಿದರು.
ಪ್ರಮುಖ ನಗರಗಳನ್ನು ಸಂಪರ್ಕಿಸಕು ಹಾಕಿದ ಚತುಷ್ಪಥ ಹೆದ್ದಾರಿ ಯೋಜನೆ, ದೇಶದ ಬಗೆಗಿನ ಕಾಳಜಿ ಭಾರತದ ಆರ್ಥಿಕ ಪ್ರಗತಿಗೆ ಕಾರಣವಾಯಿತು ಎಂದರು.

ಶಾಸಕ ಅಭಯ್ ಪಾಟೀಲ, ಅಭಿಯಾನದ ಜಿಲ್ಲಾ ಸಂಚಾಲಕರು ಮಹಾಂತೇಶ ದೊಡ್ಡಗೌಡರ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಅಭಿವೃದ್ಧಿಗೆ ಹಲವಾರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರು ಭಾರತದ ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲದೆ ವಿದೇಶಾಂಗ ಸಚಿವರಾಗಿ ಮತ್ತು ಸಂಸತ್ತಿನ ವಿವಿಧ ಪ್ರಮುಖ ಸ್ಥಾಯಿ ಸಮಿತಿಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆಂದರು. ಅಷ್ಟೇ ಅಲ್ಲ ಅವರು ಸಕ್ರಿಯ ವಿರೋಧ ಪಕ್ಷದ ನಾಯಕರೂ ಆಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರು ಸ್ವತಂತ್ರ ಭಾರತದ ದೇಶೀಯ ಮತ್ತು ವಿದೇಶಿ ನೀತಿಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು
ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕ ವಿಠ್ಠಲ ಹಲಗೇಕರ, ಮಾಜಿ ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ವಿಶ್ವನಾಥ್ ಪಾಟೀಲ್,ಅರವಿಂದ ಪಾಟೀಲ, ಮಹಾಪೌರ ಮಂಗೇಶ ಪವಾರ, ಉಪಮಹಾಪೌರ ವಾಣಿ ವಿಲಾಸ ಜೋಶಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತಾ ಸುತಾರ ಉಪಸ್ಥಿತರಿದ್ದರು.