ಅಂಬೇಡ್ಕರ ಜಯಂತಿ- ಅದ್ದೂರಿ ಆಚರಣೆಗೆ ಕ್ರಮ

ಅಂಬೇಡ್ಕರ್ ಜಯಂತಿಗೆ ಭರಪೂರ ಸಿದ್ಧತೆ: ಸಿದ್ಧತೆ ಪರಿಶೀಲಿಸಿದ ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಉಪಮೇಯರ್ ವಾಣಿ ವಿಲಾಸ್ ಜೋಶಿ

ಬೆಳಗಾವಿ,

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಭವ್ಯವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ.

ಈ ಹಿನ್ನೆಲೆಯಲ್ಲಿ ಮೇಯರ್ ಮಂಗೇಶ್ ಪವಾರ್ ಹಾಗೂ ಉಪಮೇಯರ್ ವಾಣಿ ವಿಲಾಸ್ ಜೋಶಿ ಅವರು ನಗರದ ಅಂಬೇಡ್ಕರ್ ಉದ್ಯಾನಕ್ಕೆ ಭೆಟ್ಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಸೌಂದರ್ಯವರ್ಧನೆ, ಸ್ವಚ್ಛತೆ, ವಿದ್ಯುತ್ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಬೇಡ್ಕರ್ ಉದ್ಯಾನದಲ್ಲಿ ದಲಿತ ನಾಯಕರೊಂದಿಗೆ ಚರ್ಚೆ

ಅಂಬೇಡ್ಕರ್ ಉದ್ಯಾನದಲ್ಲಿ ಮೇಯರ್ ಮತ್ತು ಉಪಮೇಯರ್ ದಲಿತ ಸಮುದಾಯದ ಹಿರಿಯರು, ಸಂಘಟನೆಗಳ ಪ್ರತಿನಿಧಿಗಳು ಮತ್ತು ಸಾಮಾಜಿಕ ಹೋರಾಟಗಾರರೊಂದಿಗೆ ಚರ್ಚೆಯಲ್ಲಿ ಭಾಗವಹಿಸಿದರು. ಚರ್ಚೆಯಲ್ಲಿ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ, ಸಮಾನತೆಯ ಸಂದೇಶಗಳು ಸ್ಪಷ್ಟವಾಗಿ ವ್ಯಕ್ತವಾಗಬೇಕು ಎಂದರು..

ಮೇಯರ್ ಮಂಗೇಶ್ ಪವಾರ್ ಅವರು “ಡಾ. ಅಂಬೇಡ್ಕರ್ ಅವರ ಚಿಂತನೆಯನ್ನು ಯುವ ಪೀಳಿಗೆಗೆ ಸಾರುವುದು ನಮ್ಮ ಮುಖ್ಯ ಉದ್ದೇಶ. ಕಾರ್ಯಕ್ರಮದಲ್ಲಿ ಎಲ್ಲರ ಸಹಭಾಗಿತ್ವದಿಂದ ಪ್ರೇರಣಾದಾಯಕ ವಾತಾವರಣ ಸೃಷ್ಟಿಯಾಗಲಿದೆ,” ಎಂದರು.

ಉಪಮೇಯರ್ ವಾಣಿ ವಿಲಾಸ್ ಜೋಶಿ ಅವರು, “ಸಮಾಜದ ಎಲ್ಲ ವರ್ಗಗಳ ಸಹಭಾಗಿತ್ವ ಖಚಿತಪಡಿಸಲು ಕ್ರಮಕೈಗೊಳ್ಳಲಾಗಿದೆ. ವಿಶೇಷವಾಗಿ ದಲಿತ ಸಮುದಾಯದ ಆಳವಾದ ಭಾವನೆಗಳಿಗೆ ಗೌರವ ತೋರಿಸಿ, ಅಂಬೇಡ್ಕರ್ ಜಯಂತಿ ಆಚರಣೆಗೆ ತಕ್ಕ ತಯಾರಿ ನಡೆಯುತ್ತಿದೆ,” ಎಂದು ಹೇಳಿದರು.

ಈ ಸಭೆಯಲ್ಲಿ ದಲಿತ ನಾಯಕ ಮಲ್ಲೇಶ ಚೌಗಲೆ, ಪಾಲಿಕೆ ಆಡಳಿತ ಗುಂಪಿನ ನಾಯಕ ಗಿರೀಶ ಧೋಂಗಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಕಾಂಬಳೆ, ನಗರಸೇವಕ ಸಂದೀಪ ಜೀರಗ್ಯಾಳ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!