ಬ್ಯಾನರ್ ಹರಿದವರ ಮೇಲೆ ಕ್ರಮಕ್ಕೆ ಆಗ್ರಹಬೆಳಗಾವಿ.ನಗರದ ಪ್ರಸಿದ್ಧ ಶ್ರೀ ಮಂಗಾಯಿ ಜಾತ್ರೆ ನಿಮಿತ್ತ ಹಾಕಲಾಗಿದ್ದ ಸ್ವಾಗತ ಬ್ಯಾನರ್ ಹರಿದವರ ವಿರುದ್ಧ ಕ್ರಮ ತೆಗೆದು ಕೊಳ್ಳಬೇಕೆಂದು ಪಾಲಿಕೆಯ ಬಿಜೆಪಿ ನಗರಸೇವಕರ ನಿಯೋಗ ಆಗ್ರಹಿಸಿದೆ. ಮೇಯರ್ ಮಂಗೇಶ ಪವಾರ್, ಉಪಮೇಯರ ವಾಣಿ ಜೋಶಿ ಮತ್ತು ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ನೇತ್ರತ್ವದ ನಿಯೋಗ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಅವರಿಗೆ ಮನವಿ ಪತ್ರ ಅರ್ಪಿಸಿತು. ಜಾತ್ರೆಯ ಸಂದರ್ಭದಲ್ಲಿ ಈ ಮೂಲಕ ಶಾಂತಿ ಕದಡುವ ಕೆಲಸವನ್ಬು ಕಿಡಿಗೇಡಿಗಳು ಮಾಡುತ್ತಿದ್ದಾರೆ….

