ಪತ್ರಕರ್ತರು ಮಕ್ಕಳನ್ನು ಪ್ರೋತ್ಸಾಹಿಸುತ್ತಿರುವುದು ಸಂತಸದ ಸಂಗತಿ: ಡಾ. ಪ್ರಭಾಕರ ಕೋರೆ
ಪತ್ರಕರ್ತರು ಮಕ್ಕಳನ್ನು ಪ್ರೋತ್ಸಾಹಿಸುತ್ತಿರುವುದು ಸಂತಸದ ಸಂಗತಿ: ಡಾ. ಪ್ರಭಾಕರ ಕೋರೆ ಬೆಳಗಾವಿ: ಪತ್ರಕರ್ತರು ಸಮಾಜದ ಒಂದು ಅವಿಭಾಜ್ಯ ಅಂಗ. ಮಕ್ಕಳಿಗಾಗಿ ಮೊದಲ ಬಾರಿಗೆ ಪ್ರೋತ್ಸಾಹ ನೀಡಲು ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ ಎಂದು ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಹೇಳಿದರು. ನಗರದ ಎಸ್.ಜಿ.ಬಾಳೇಕುಂದ್ರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ವಿಶಿಷ್ಟ ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಬೆಳಗಾವಿ ಪತ್ರಕರ್ತರ ಸಂಘದ…

