ಕೃಷ್ಣಮೃಗಗಳ ಸಾವಿನ ಬಗ್ಗೆ ನಿರ್ಲಕ್ಷ್ಯ ಬೇಡ- ಸಚಿವ ಸತೀಶ್
ಬೆಳಗಾವಿ: ರಾಣಿ ಚೆನ್ನಮ್ಮ ಮಿನಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವುಗಳು ಆತಂಕ ಸೃಷ್ಟಿಸಿರುವ ಹಿನ್ನೆಲೆ, ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ತುರ್ತುವಾಗಿ ಮೃಗಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿದರು.ಪ್ರಾಣಿಗಳ ಆರೈಕೆ, ಕಾಯಿಲೆ ವ್ಯಾಪಕಗೊಳ್ಳುತ್ತಿರುವ ಶಂಕೆ ಹಾಗೂ ಮೃಗಾಲಯದ ಒಳಗಿನ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದು, “ಯಾವುದೇ ನಿರ್ಲಕ್ಷ್ಯ ಮರುಕಳಿಸಬಾರದು” ಎಂದು ಸಚಿವರು ಸ್ಪಷ್ಟ ಸೂಚನೆ ನೀಡಿದರು.ಇತ್ತೀಚಿನ ದಿನಗಳಲ್ಲಿ ಕೃಷ್ಣಮೃಗಗಳಲ್ಲಿ ವೈರಲ್ ರೋಗ ಕಾಣಿಸಿಕೊಂಡಿದ್ದರಿಂದ ಅನೇಕ ಮೃಗಗಳು…

