ಕೆಎಲ್ಇ ಸೊಸೈಟಿ ಪದಾಧಿಕಾರಿಗಳ ಆಯ್ಕೆ ಅವಿರೋಧ
ಫೆ. 7–8ರಂದು ನಿಗದಿಯಾಗಿದ್ದ ಮತದಾನ ರದ್ದುಬೆಳಗಾವಿ: ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸೈಟಿಯ (ಕೆಎಲ್ಇ) ಮುಂದಿನ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಯ ಚುನಾವಣಾಧಿಕಾರಿಗಳು ಬುಧವಾರ ಅಧಿಕೃತ ಪ್ರಕಟಣೆ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ. ಪ್ರಕಟಣೆಯ ಪ್ರಕಾರ, ಕೌಜಲಗಿ ಮಹಾಂತೇಶ ಶಿವಾನಂದ ಅವರು ಅಧ್ಯಕ್ಷರಾಗಿ, ತಟವಟಿ ಬಸವರಾಜ ಶಿವಲಿಂಗಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಕೋರೆ ಅಮಿತ ಪ್ರಭಾಕರ, ಬಾಗೇವಾಡಿ ಪ್ರವೀಣ ಅಶೋಕ, ದೊಡವಾಡ ಪ್ರೀತಿ ಕರಣ,…

