Headlines

ರಸ್ತೆ ಅಪಘಾತ- 6 ಸಾವು

ಖಾನಾಪುರ ತಾಲೂಕಿನ ಬೀಡಿ-ಕಿತ್ತೂರ ರಸ್ತೆಯಲ್ಲಿ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟ ಮಾಹಿತಿ ಇದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಿತ್ತೂರಿನಿಂದ ಬೀಡಿ ಗ್ರಾಮದತ್ತ ಹೊರಟಿದ್ದ ಪ್ರಯಾಣಿಕರ ಕಾರು ಮಂಗೇನಕೊಪ್ಪ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ…

Read More

ಗಡ್ಕರಿ ಕಂಡ್ರೆ ಸಚಿವ ಸತೀಶ್ಗೆ ಹೆಮ್ಮೆ…!

ಬೆಳಗಾವಿಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಯಾರನ್ನೂಅಷ್ಟು ಸಲೀಸಾಗಿ ಹೊಗಳುವುದಿಲ್ಲ.ಆದರೆ ಬೆಳಗಾವಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಇದೇ ಸತೀಶ ಜಾರಕಿಹೊಳಿಯವರು ಬಾಯ್ತುಂಬ ಹೊಗಳಿದರು, ಗಡ್ಕರಿ ಅವು ಹೆದ್ದಾರಿಯ ಬಾದ್ ಷಾ ಎಂದರು,ಕೇಂದ್ರ ಸಾರಿಗೆ ಸಚಿವಾಲಯದಿಂದ ರಾಜ್ಯದ ರಸ್ತೆಗಳು ಸುಧಾರಣೆ ಆಗಬೇಕು ಈ ರಸ್ತೆ ಗಳಿಂದರಾಜ್ಯದಲ್ಲಿ ಅಭಿವೃದ್ಧಿ ಆಗಬೇಕು. ಇದರಿಂದ ಅನೇಕ ಉದ್ಯಮಿಗಳು ಬರಬೇಕೆಂದು ಕೇಂದ್ರಸರ್ಕಾರದ ಕನಸಿದೆಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ…

Read More

ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ-ಬಳಕೆಗೆ ಸಲಹೆ

ಹೆದ್ದಾರಿಗಳು ದೇಶದ ಅಭಿವೃದ್ಧಿಗೆ‌ ರಾಜಮಾರ್ಗಗಳು: ಸಚಿವ ನಿತಿನ್ ಗಡ್ಕರಿ ಬೆಳಗಾವಿ, ಫೆ.22(ಕರ್ನಾಟಕ ವಾರ್ತೆ):ದೇಶದಾದ್ಯಂತ ಗ್ರೀನ್ ಕಾರಿಡಾರ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವುದು ಕೇಂದ್ರ ಸರಕಾರದ ಆದ್ಯತೆಯಾಗಿದೆ. ದೇಶದ ಪ್ರಮುಖ ನಗರಗಳ ಮಧ್ಯೆ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಿ ಸುಗಮ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ಬೆಳಗಾವಿ ಜಿಲ್ಲೆಯ 1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, 941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್…

Read More

ಅರಣ್ಯಾಧಿಕಾರಿ ನಾಯಿಕವಾಡಿ ಅಮಾನತ್

IFS ಅಧಿಕಾರಿ ಶಿವಾನಂದ ನಾಯಕವಾಡಿ ಅಮಾನತು ಬೆಳಗಾವಿ: ರಾಯಭಾಗ ಶಾಸಕರೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿ ಅನುಚಿತವಾಗಿ ಮಾತನಾಡಿದ ಆರೋಪದ ಮೇಲೆ ಸರಕಾರ IFS ಅಧಿಕಾರಿ ಶಿವಾನಂದ ನಾಯಕವಾಡಿ ಅವರನ್ನು ಅಮಾನತುಗೊಳಿಸಿದೆ.ಕಳೆದ ಕೆಲ ತಿಂಗಳ ಹಿಂದೆ ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಅವರು ಸರಕಾರಿ ಕೆಲಸದ‌ ನಿಮಿತ್ತ ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ(DCF) ಶಿವಾನಂದ ನಾಯಿಕವಾಡಿ ಅವರಿಗೆ ದೂರವಾಣಿ ಕರೆ ಮಾಡಿದ್ದಾಗ, ಶಾಸಕ ಮತ್ತು ಅಧಿಕಾರಿ ಮಧ್ಯೆ ವಾಗ್ವಾದ ನಡೆದು, ಆ ಆಡಿಯೋ ವೈರಲ್ ಆಗಿತ್ತು. ಈ ಪ್ರಕರಣವನ್ನು ಸರಕಾರ…

Read More

ಫೈಜುಲ್ಲಾ ಇನ್ನಿಲ್ಲ

ಬೆಳಗಾವಿಗಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆಪ್ತ, ಜೆಡಿಎಸ್ ವರಿಷ್ಠ ಪೈಜುಲ್ಲಾ ಮಾಡಿವಾಲೆ ಹೃದಯಾಘಾತದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೈಜುಲ್ಲಾ ಮಾಡಿವಾಲೆ ಬೆಳಗಾವಿ ಜೆಡಿಎಸ್ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಆಪ್ತರಾಗಿದ್ದರು. ನಾಳೆ ಬೆಳಗಾವಿಗೆ ಕುಮಾರ ಸ್ವಾಮಿ ಆಗಮಿಸಲಿದ್ದಾರೆ.

Read More

ಸಭೆಗೆ ಗೈರಾದರೆ ಶಿಸ್ತು ಕ್ರಮ ಗ್ಯಾರಂಟಿ

ಸಭೆಗೆ ಗೈರಾದರೆ ಶಿಸ್ತು ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆಬೆಳಗಾವಿ: ಮುಂಬರುವ ಕೆಡಿಪಿ ಸಭೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಗೈರು ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಹಳೆ ಜಿಪಂ ಸಭಾಭವನದಲ್ಲಿ (ಫೆ.21) ಬುಧವಾರ ಜಿಲ್ಲೆಯ ಕೆಡಿಪಿ ಸಭೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬರಗಾಲ ಎದುರಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ,…

Read More

ಮೃನಾಲ್, ಗಿರೀಶ ಹೆಸರು ಹೈಕಮಾಂಡಗೆ ಶಿಫಾರಸು.

ಬೆಂಗಳೂರು. ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರುಗಳನ್ನು ಹೈಕಮಾಂಡಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿ ಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಬೆಳಗಾವಿ ಕ್ಷೇತ್ರಕ್ಕೆ ಮೃನಾಲ್ ಹೆಬ್ಬಾಳಕರ ಮತ್ತು ಡಾ. ಗಿರೀಶ ಸೋನವಾಲ್ಕರ ಹೆಸರನ್ಬು ಕಳಿಸಲು ನಿರ್ಧರಿಸಲಾಯಿತು. ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಲಕ್ಷ್ಮಣರಾವ್ ಚಿಂಗಳೆ ಹೆಸರನ್ಬು…

Read More

CPI ಮೇಲೆ ಕ್ರಮ‌ ಜರುಗಿಸಿ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಸಬ್ ಇನ್ಸ್ ಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಬೇಕು : ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು: ರಾಮನಗರ ವಕೀಲರ ಮೇಲೆ ಪ್ರಕರಣ ಹಾಕಿರುವುದರ ಕುರಿತು ರಾಜ್ಯದ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಮನಗರ ಸಬ್ ಇನ್ಸಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.ಶೂನ್ಯವೇಳೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಸ್ತಾಪಿಸಿದ ವಿಷಯದ ಮೇಲೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿಯೂ ಒಂದು ಘಟನೆ ನಡೆಯಿತು. ಪೊಲಿಸರು ಮತ್ತು ವಕೀಲರ ನಡಿವೆ ಸಂಘರ್ಷ…

Read More

ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆ

ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮಮಂಡಳಿ ನಿರ್ದೇಶಕ ಅಶೋಕ ಪಾಟೀಲ ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು…

Read More

6975 ಕೋಟಿ ಹೆದ್ದಾರಿ ಕಾಮಗಾರಿಗೆ ಚಾಲನೆ

22 ರಂದು ನಿತಿನ್ ಗಡ್ಕರಿ ಬೆಳಗಾವಿಗೆ ಆಗಮನ. ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದನೂತನ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಲ್ಲಿ ಮಹತ್ವದ ಕೊಡುಗೆ-ಸಂಸದ ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಕಲಬುರಗಿ, ಬೀದರ ಈ ಎಲ್ಲ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು 6975 ಕೋಟಿ ರೂ.ಗಳ ವೆಚ್ಚದಲ್ಲಿ ರಾಷ್ಟಿçಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…

Read More
error: Content is protected !!