Headlines

ಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಅಸ್ತು

ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಅಸ್ತುಬೆಳಗಾವಿ.ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,. ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ವಾಣಿ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಸಂಶೋಧನೆ ಮತ್ತು ನಿಯತಕಾಲಿಕೆ ಪ್ರಕಾರ ಶೇ 6 ರಿಂದ 8 ರಷ್ಟು…

Read More

ವಿವಸ್ತ್ರ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಳಗಾವಿ. ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗೆ ಕಾರಣವಾದ ಹೊಸವಂಟಮೂರಿ ಮಹಿಳೆಯ ವುವಸ್ತ್ರ ಪ್ರಕರಣ ಈಗ ಸಿಐಡಿಗೆ ಹಸ್ತಾಂತರವಾಗಿದೆ. ಈ‌ ಕುರಿತು ಅಧಿಕೃತ ಆದೇಶ ಕೂಡ ಹೊರಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ಬು ಅಮಾನತ್ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಈಗಾಗಲೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ನೀಡಿತ್ತು. ನಂತರ ಮೂರು ಆಯೋಗಗಳು ಸಂತ್ರಸ್ತೆಯನ್ನು ಭೆಟ್ಟಿಯಾಗಿ ಸಾಂತ್ವನ ಹೇಳಿದ್ದವು. ಈಗ ಈ…

Read More

sc st ನೌಕರ ಸಂಘಕ್ಕೆ ಉದಯಕುಮಾರ ಆಯ್ಕೆ

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ‌ ಎಸ್ ಸಿ ಎಸ್ಟಿ ನೌಕರ ಸಂಘದ ಅಡಾಕ್ ಅಧ್ಯಕ್ಷರಾಗಿ ಉದಯಕುಮಾರ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಬೆಳಗಾವಿ ಮಹಾನಗರ ಪಾಲಿಕೆಯ ಉಪ ಕಾರ್ಯದರ್ಶಿ ( ಆಡಳಿತ) ಯಾಗಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಗಜಾನನ ಕಾಂಬಳೆ, ಮತ್ತು ಕಾರ್ಯದರ್ಶಿ ಯಾಗಿ ಸಚಿನ್ ಕಾಂಬಳೆ ಆಯ್ಕೆಯಾಗಿದ್ದಾರೆಂದು ಹಂಗಾಮಿ ಅಧ್ಯಕ್ಷ ಡಾ. ಗಜಾನನ ಕಾಂಬಳೆ ತಿಳಿಸಿದ್ದಾರೆ.

Read More

ವಂಟಮೂರಿ ಪ್ರಕರಣ- ಸರ್ಕಾರಕ್ಕೆ ನೋಟೀಸ್..!

ಬೆಳಗಾವಿ ಬೆಳಗಾವಿಯ ಹೊಸ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.ಘಟನೆ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಎನ್‌ಎಚ್‌ಆರ್ ಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ .ಪ್ರಕರಣದ ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ…

Read More

KAKATI CPI SUSPEND

ಬೆಳಗಾವಿ. ಹೊಸ ವಂಟಮೂರಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತ್ ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ದಿನವಷ್ಟೇ ಈ ಪ್ರಕರಣ ಸದನದಲ್ಕಿ ಪ್ರತಿಧ್ವನಿಸಿತ್ತು. ಇಂದು ಬಿಜೆಪಿಯವರೂ ಪ್ರತಿಭಟನೆ ನಡೆಸಿದ್ದರು.

Read More

ಬೆಳಗಾವಿಗೆ ಬಿಜೆಪಿ ಸತ್ಯ ಶೋಧನಾ ತಂಡ

ಬೆಳಗಾವಿ, ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣವಬ್ನು ಬಿಜೆಪಿ ಹೈಕಮಾಂಡ ಗಂಭೀರವಾಗಿ ಪರಿಗಣಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಸಂಸದರ ನಿಯೋಗ ನಾಳೆಯೇ ಭೇಟಿ ನೀಡಲಿದೆ.ಐವರು ಸಂಸದರು ದೆಹಲಿಯಿಂದ ಆಗಮಿಸಲಿದ್ದಾರೆ ಅಪರಾಜಿತ್ ಸಾರಂಗಿ ಸುನಿತಾ ದುಗ್ಗಲ್ ರಂಜಿತಾ ಕೂಲಿ ರಾಕೆಟ್ ಚಟರ್ಜಿ ಹಾಗೂ ಆಶಾಲಾಕಡ ಬೆಳಗಾವಿಗೆ ಆಗಮಿಸಲಿದ್ದಾರೆ ಬೆಳಗಾವಿಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ ಎಂದರು. ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ನಡೆದ ಘಟನೆ…

Read More

ಲಕ್ಷ್ಮೀಗೆ ನಿರಾಣಿ ಸವಾಲ್..!

ಲಕ್ಷ್ಮೀ ಹೆಬ್ಬಾಳಕರ್ ನಿರಾಣಿ ಸವಾಲ್ ಹಾಕಿದ್ದೇನು ಗೊತ್ತಾ…?? ಬೆಳಗಾವಿ- ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಡುವ ವಿಚಾರದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ.ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಅವರು ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ, ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟರೆ ಬಿಜೆಪಿ ಮಂತ್ರಿಗಳಿಗೆ ಕುಂದಾ ಕೊಟ್ಟು ಸನ್ಮಾನ ಮಾಡ್ತೀನಿ ಎಂದು…

Read More

ಒಗ್ಗಟ್ಟಿನ ಸಂದೇಶ ಕೊಟ್ಟ ವಿಜಯೇಂದ್ರ.

ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ನಗರಸೇವಕರ ಸಮ್ಮುಖದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾಸಕ ಅಭಯ ಪಾಟೀಲರ ಮನೆಯಲ್ಲಿ ರಾಜ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು e belagavi ಡಾಟ್ ಕಾಮ್ ವರದಿ ಮಾಡಿತ್ತು. ನಿರೀಕ್ಷೆಯಂತೆ ವಿಜಯೇಂದ್ರ ಅವರು ಶಾಸಕರ ಮನೆಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಲಾಯಿತು.. ನಂತರ ಕೆಲ ಹೊತ್ತು ಶಾಸಕರು ಮತ್ತು ಪ್ರಮುಖರೊಂದಿಗೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರು ಮಾತುಕತೆ ನಡೆಸಿದರು. ಆಭಯ ಪಾಟೀಲರು ಛತ್ತೀಸಗಡ…

Read More

ಅಭಯ- ವಿಜಯೇಂದ್ರ ಚರ್ಚೆ..? ಏನಿದು ರಹಸ್ಯ ಮಾತು!

ಬೆಳಗಾವಿ. ಸಂಘಟನಾ ಚತುರ ಎಂದೇ ಹೆಸರಾದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತುಕತೆ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಆಬಯ ಪಾಟೀಲರ ನಿವಾಸಕ್ಕೆ ಆಗಮಿಸುವ ಬಿಜಯೇಂದ್ರ ನಾಷ್ಟಾ ಪೇ ಚರ್ಚೆ ರೀತುಯಲ್ಲಿ ಮಾತುಕತೆ ನಡೆಸಲಿದ್ದಾರೆಂದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ನಗೆಸೇವಕರಿಗೂ ಆಹ್ವಾನ ನೀಡಲಾಗಿದೆ. ಆದರೆ ಕೆಲವೊಂದು ವಿಷಯಗಳ ಬಗ್ಗೆ ವಿಜಯೇಂದ್ರ ಅಭಯ ಜೊತೆ ಚರ್ಚೆ ನಡೆಸಲುದ್ದಾರೆಂದು ಗೊತ್ತಾಗಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಈ ಮಾತುಕತೆ ಕುತೂಜಲ…

Read More

ರಾಕ್ ಗಾರ್ಡನ್ಗೆ ಸಚಿವ ತಂಗಡಗಿ ಭೆಟ್ಟಿ

ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ; ಪರಿಶೀಲನೆ ಬೆಳಗಾವಿ, ಡಿ.14 ಹಿಂದುಳಿದ‌ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಬೆಳಗಾವಿ ಜಿಲ್ಲೆ‌‌ ಬೈಲಹೊಂಗಲ‌ ತಾಲ್ಲೂಕಿನಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಸ್ಥಳೀಯ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಅಧಿಕಾರಿಗಳೊಂದಿಗೆ ಸೈನಿಕ ಶಾಲೆಗೆ ಭೇಟಿ ನೀಡಿದ‌ ಸಚಿವರು ಶಾಲೆಯಲ್ಲಿನ ಮೂಲಸೌಲಭ್ಯ…

Read More
error: Content is protected !!