Headlines

ಅನ್ಯತಾ ಭಾವಿಸಬೇಡಿ..!

ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆ, ಅನ್ಯಥಾ ಭಾವಿಸಬೇಡಿ – ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮನವಿ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಆಪ್ತ ಸಹಾಯಕರ ಮೂಲಕ ಹೇಳಿಕೆ ನೀಡಿರುವ…

Read More

ಸಚಿವೆ ಲಕ್ಷ್ಮೀ ವಿರುದ್ಧ ಪತ್ರಕರ್ತರು ಗರಂ

ಪತ್ರಕರ್ತರ ಬಗ್ಗೆ ಸಚಿವೆ ಹೆಬ್ಬಾಳ್ಕರ ಅವಮಾನಕರ ಹೇಳಿಕೆ: ಎಐಸಿಸಿ ಹಾಗೂ ಸಿಎಂಗೆ ದೂರು ನೀಡಲು ಪತ್ರಕರ್ತರ ನಿರ್ಧಾರ. ಪತ್ರಿಕಾ ದಿನದಂದೇ ನಡೆದ ಸಚಿವೆ ವಿರುದ್ಧ ಸಿಡಿದೆದ್ದ ಪತ್ರಕರ್ತರು ಅವಮಾನ ಸಹಿಸಲ್ಲ ಅಂದ್ರು ಪತ್ರಕರ್ತರು. ಇದು ಇಡೀ ಪತ್ರಕರ್ತರ ಸಮೂಹಕ್ಕೆ ಮಾಡಿದ ಅವಮಾನ. 42 ಕ್ಕೂ ಹೆಚ್ಚು ಪತ್ರಕರ್ತರು ಭಾಗಿ. ಬೈಟ ತೆಗೆದು ಕೊಳ್ಳಲು ಹೋದವರಿಗೂ ಆದ ಕಹಿ ಅನುಭವ ಬಿಚ್ಚಿಟ್ಟ ಪತ್ರಕರ್ತರು. ‌ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ…

Read More

ಪೌರ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಗರಸೇವಕ

ಬೆಳಗಾವಿ. ಮಹಾನಗರ ಪಾಲಿಕೆಯ ಎಂಎನ್ಎಸ್ ಸದಸ್ಯ ರವಿ ಸಾಳುಂಕೆ ಅವರು ತಮ್ಮ ವಾರ್ಡನ ಪೌರ ಕಾರ್ಮಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು . ಪೌರ ಕಾರ್ಮಿಕರಿಗೆ ಹಬ್ಬದ ಉಡುಗೊರೆ ನೀಡಿ ಶುಭ ಹಾರೈಸಿದರು.

Read More

ಉಡುಪಿಯಲ್ಲಿ ಕೊಲೆ ಬೆಳಗಾವಿಯಲ್ಲಿ ಆರೋಪಿ ಅಂದರ್

ಬೆಳಗಾವಿಉಡುಪಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ, ಕುಡಚಿಯ ಪ್ರವೀಣ್ ಅರುಣ್ ಚೌಗಲೆ ಎಂಬಾತನೇ ಬಂಧಿತ ವ್ಯಕ್ತಿ, ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಗೊತ್ತಾಗಿದೆ.ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿದ್ದ ಎಂದು ಹೇಳಲಾಗಿದೆ.ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲಿಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ

Read More

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಮಹಾಪೂರ

ಬೆಂಗಳೂರು ಭಾರತೀಯ ಜನತಾ ಪಕ್ಷ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಜಯೆಂದ್ರ ಯಡಿಯೂರಪ್ಪ ಅವರನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ ಅವರು ಬೆಂಗಳೂರಿನಲ್ಲಿ‌ ಭೇಟಿಯಾಗಿ ಹೂಗುಚ್ಚ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿ, ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿಯನ್ನು ವಿಜಯೇಂದ್ರ ಹೊಂದಿದ್ದಾರೆ. ಅವರ ಕೆಲಸವನ್ನು ಗಮನಿಸಿಯೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದರು….

Read More

ರೈತರ ಪರ ಮಾತಾಡಿದ ಸಚಿವೆ ಲಕ್ಷ್ಮೀ..!

ನೀರು ಸಂಸ್ಕರಣಾ ಘಟಕ: ರೈತರ ಪರ ಧ್ವನಿ ಎತ್ತಿದ ಸಚಿವರು ಹೆಚ್ಚಿನ ಪರಿಹಾರ ನೀಡಲು ಕೋರಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಬೆಳಗಾವಿ : ಒಳಚರಂಡಿ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಜಮೀನು ನೀಡಿರುವ ಹಲಗಾ ಗ್ರಾಮದ ರೈತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ಸರಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ…

Read More

ತೆಲಂಗಾಣದಲ್ಲಿ ಚನ್ನರಾಜ ಓಟ..!

ತೆಲಂಗಾಣ ವಿಧಾನಸಭೆ ಚುನಾವಣೆ ಕಾರ್ಯತಂತ್ರದಲ್ಲಿ ಚನ್ನರಾಜ ಹಟ್ಟಿಹೊಳಿ ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು….

Read More

ಬೆಳಗಾವಿಗೂ ಬರಲಿದೆ ವಂದೇ ಭಾರತ್..!

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಡ.‌ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹಕಾರ ಬೆಳಗಾವಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ…

Read More

ದೀಪಾವಳಿ ಶುಭಾಶಯ

ಬೆಳಗಾವಿ. ಬೆಳಗಾವಿ ಮಹಾನಗರ ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಾಣಿ ವಿಲಾಸ ಜೋಶಿ ಮತ್ತು ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾ ವಿಜಾಪುರೆ ಅವರು ಶಾಸಕ ಅಭಯ ಪಾಟೀಲರನ್ಬು ಭೆಟ್ಟಿ ಮಾಡಿ ದೀಪಾವಳಿ ಶುಭಾಶಯ ಕೋರಿದರು. ಇಂದು ಬೆಳಿಗ್ಗೆ ಶಾಸಕರ ಮನೆಗೆ ತೆರಳಿ ಅವರು ಶುಭ ಕೋರಿದರು. ಈ ಸಂದರ್ಭದಲ್ಲಿ ಪಕ್ಷ ಸಙಘಟನೆ ಸೇರಿದಂತೆ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಾವ ರೀತಿ ಕಾರ್ಯನಿರ್ವಹುಸಬೇಕು ಎನ್ನುವುದರ ಬಗ್ಗೆ ಸಲಹೆ ನೀಡಿದರು.

Read More

ಜನರತ್ತ ಸೈಕಲ್ ಏರಿ ಹೊರಟ ಅಭಯ

ಬೆಳಗಾವಿ.ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಮತ್ತೇ ತಮ್ಮ ಸೈಕಲ್ ಪಯಣ ಶುರು ಮಾಡಿದ್ದಾರೆ.ಬಹುತೇಕ ಜನಪ್ರತಿನಿಧಿಗಳು ತಮ್ಮ‌ಐಶಾರಾಮಿ ಕಾರುಗಳಲ್ಲಿ ಜನರ ಸಮಸ್ಯೆ ಆಲಿಸಲು ಹೊರಟರೆ ಶಾಸಕ ಅಭಯ ಪಾಟೀಲರು ಸೈಕಲ್ ಏರಿ ಹೊರಟಿದ್ದಾರೆ‌. ಇದು ಇಂದು ನಿನ್ನೆ ಆರಂಭ ಮಾಡಿದ್ದಲ್ಲ. ಅಥವಾ ಬರೀ ಪೊಟೊ ಪೋಜ್ ಗೂ ಹೊರಟ ಸೈಕಲ್ ಫೇರಿ ಅಲ್ಲ. ಕಳೆದ ಹಲವು ವರ್ಷಗಳಿಂದ ಅಭಯ ಪಾಟೀಲರು ಸೈಕಲ್ ಮೇಲೆಯೇ ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸಂಚರಿಸಿ ಸಾರ್ವಜನಿಕರ ಅಹವಾಲು ಆಲಿಸುವ ಕೆಲಸ ಮಾಡುತ್ತಿದ್ದರು.ಈಗ…

Read More
error: Content is protected !!