
ಬೆಳಗಾವಿಗೆ ಬರುವ ಐಟಿಗಳಿಗೆ ಎಳ್ಳು ನೀರು
ಬೆಳಗಾವಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ಐಟಿಗಳು ಬರಬೇಕು ಎನ್ನುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನಕ್ಕೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಡುತ್ತಿದೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದರು. ಇಲ್ಲಿನ ವಿದ್ಯಾವಂತ ಯುವಕರು ಐಟಿ ಉದ್ಯಮದಲ್ಲಿ ಉದ್ಯೋಗಕ್ಕಾಗಿ ಪುಣೆ, ಮುಂಬೈ, ಬೆಂಗಳೂರು, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುತ್ತಿದ್ದಾರೆ. ಅವರಿಗೆ ಬೆಳಗಾವಿಯಲ್ಲಿಯೇ ಐಟಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಯತ್ನ ಮಾಡಲಾಗಿತ್ತು ಎಂದು ಶಾಸಕ ಅಭಯ ಪಾಟೀಲರು ಹೇಳಿದರು,. ಮುರುಗೇಶ್ ನಿರಾಣಿ ಕೈಗಾರಿಕಾ ಸಚಿವರಾಗಿದ್ದಾಗ ಬೆಳಗಾವಿಯಲ್ಲಿ ಐಟಿ…