
ಬೆಳಗಾವಿ ಪಾಲಿಕೆ ಹಣಿಯಲು ಕೈ ಕಸರತ್ತು..!
ಬೆಳಗಾವಿ. ಬಿಜೆಪಿ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ಕಸರತ್ತು ತೆರೆಮರೆಯಲ್ಲಿ ಕಾಂಗ್ರೆಸ್ ನಡೆಸಿದೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಆಗಿನ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಿತ್ತು. ಆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಡಾ. ಶಾಲಿನಿ ರಜನೀಶ್ ಆಡಳಿತಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ ವಂದನಾ ಬೆಳಗುಂದಕರ ಇದ್ದಾಗಲೂ ಕೂಡ ಇದೇ ಪರಿಸ್ಥಿತಿ ಬಂದಿತ್ತು. ಈಗ ಕನ್ನಡ ಮರಾಠಿ ವಿವಾದ ಇಲ್ಲವೇ ಇಲ್ಲ. ಮಹಾನಗರ ಪಾಲಿಕೆಯಲ್ಲಿ ಪಕ್ಷ ಆಧಾರಿತ ಚುನಾವಣೆ ನಡೆದ…