
ಸಹಕಾರಿ ಏಳ್ಗೆಗೆ ಹೈನುಗಾರರು ಶ್ರಮಿಸಲಿ
ಮೂಡಲಗಿ: ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈನುಗಾರರು ಮತ್ತು ಗ್ರಾಹಕರಿಂದ ನಮ್ಮ ಸಂಸ್ಥೆ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು. ಇತ್ತೀಚೆಗೆ…