15 ರಂದು ಕೆಎಲ್ಇ ಅತ್ಯಾಧುನಿಕ ಆಯುರ್ವೇದ ಸ್ಪಾ ಕೇಂದ್ರ ಲೋಕಾರ್ಪಣೆ
ನಾಳೆ ಬೆಳಗಾವಿ: ಇಲ್ಲಿನ ಶಹಾಪುರದಲ್ಲಿರುವ ಕೆಎಲ್ಇ ಸಂಸ್ಥೆಯ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಆಯುಷ್ಮತಿ ಆಯುರ್ವೇದ ಸ್ಪಾ ಕೇಂದ್ರ ಡಿ.15ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ತಿಳಿಸಿದರು. ಇಲ್ಲಿನ ಶಹಾಪುರದಲ್ಲಿರವ ಆಯುರ್ವೇದ ಕಾಲೇಜಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಆಗಮಿಸಲಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಲಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲೀನಿ ರಜನೀಶ್, ಕೇರಳದ ಡಾ.ದೇವಿಕಾ ದೇಶಮುಖ ಹಾಗೂ…

