Headlines

ಮಹಾ ಸಿಎಂಗೆ ಆಹ್ವಾನ ಕೊಟ್ಟ ಹಾರನಹಳ್ಳಿ

ಮುಂಬಯಿ. ಬೆಂಗಳೂರಿನಲ್ಲಿ ಇದೇ 18 ಮತ್ತು‌ 19 ರಂದು ಎರಡು ದಿನಗಳ ಕಾಲ ನಡೆಯಲಿರುವ ಆಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶಕ್ಕೆ ಎಲ್ಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿದ್ದತೆಯಲ್ಲಿ ತೊಡಗಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ರಾಜನಾಥ ಸಿಂಗ್, ಪ್ರಲ್ಹಾದ ಜೋಶಿ, ಬಿ.ಎಲ್. ಸಂತೋಷ ಸೇರಿದಂತೆ ಇನ್ನೂ ಹಲವಾರು ಗಣ್ಯಾತಿ ಗಣ್ಯರಿಗೆ ಖುದ್ದು ಭೆಟ್ಡಿಯಾಗಿ ಆಮಂತ್ರಣ ಕೊಟ್ಡು ಬಂದಿದ್ದಾರೆ. ಇಂದು ಬೆಳಿಗ್ಗೆ ಮುಂಬಯಿಗೆ…

Read More

ಸಿದ್ದಲಿಂಗ ಕೈವಲ್ಯಾಶ್ರಮದ ಜಾತ್ರಾ ಮಹೋತ್ಸವ

ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಡೆಯುತ್ತಿರುವ…

Read More

ಕಾರ್ಯಕ್ರಮ ಮುಂದೂಡಿ.. ಮೇಯರ್ ಗೆ ಆಯುಕ್ತರ ಪತ್ರ

ಬೆಳಗಾವಿ. ಗಡಿನಾಡ ಬೆಳಗಾವಿ ನಗರದಲ್ಲಿ ತೀವೃ ಚರ್ಚೆಗೆ ಗ್ರಾಸವಾಗಿರುವ ಛತ್ರಪತಿ ಸಂಭಾಜಿ‌ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಬೇಕೆಂದು ಪಾಲಿಕೆ ಆಯುಕ್ತರು ಮೇಯರ್ ಗೆ ಪತ್ರವನ್ಬು ಬರೆದಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರುಈ ವಿಷಯ ತಿಳಿಸಿದರು. ಈ‌ ಮೂರ್ತಿ ಸ್ಥಾಪನೆಗೆ ಪಾಲಿಕೆ ಅನುದಾನ ನೀಡಿದೆ. ಅದನ್ಬು ಇನ್ನಷ್ಟು ಅದ್ದೂರಿ ಮಾಡಬೇಕು ಎನ್ನುವುದು ಆ ಭಾಗದ ಜನರ ಆಶಯ. ಮೇಲಾಗಿ ಈ ವಿಷಯದಲ್ಲಿ ಕೋರ್ಟನ ನಿರ್ದೇಶನದ‌ ಜೊತೆಗೆ ಶಿಷ್ಟಾಚಾರವನ್ನು ಪಾಲಿಸಬೇಕು. ಆದ್ದರಿಂದ ಅದನ್ನು ಕೆಲ…

Read More

ಡಿಕೆಶಿಗೆ ಟಕ್ಕರ್ ಕೊಡಲು ಸತೀಶ ರಣತಂತ್ರ

ಡಿಸಿಸಿ ಅಧ್ಯಕ್ಷ ಗಾದಿಗೆ ಗುದ್ದಾಟಬೆಳಗಾವಿ ರಾಜಕಾರಣ `ಸರ್ಕಾರಕ್ಕೆ ಕಂಟಕ ? ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಎಂಟ್ರಿ.ಸತೀಶ್ ಉಗ್ರ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸತೀಶ್ ಕೋಟೆ ಮುರಿಯಲು ಹೆಬ್ಬಾಳಕರ ಮೂಲಕ ತಂತ್ರಗಾರಿಕೆ. ಸಿಟಿ ರವಿ ಪ್ರಕರಣದಲ್ಲೂ ಸತೀಶ್ ಮಾತು ಕೇಳದೇ ಯಡವಟ್ಟು ಮಾಡಿಕೊಂಡ ಪೊಲೀಸರು. ಬೆಳಗಾವಿ. ಬೆಳಗಾವಿ ಜಿಲ್ಲೆಯವ ಕಾಂಗ್ರೆಸ್ ರಾಜಕಾರಣದಲ್ಲಿ ನಡೆದಿರುವ ಬೆಳವಣಿಗೆ ಎಲ್ಲರಿಗೂ ಗೊತ್ತಿಲ್ಲ ಎಂದಿಲ್ಲ. ಸಧ್ಯ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಸಚಿವರ ನಡುವೆ ಗುದಮುರಿಗೆ ನಡೆದಿದೆ. ಮೂಲಗಳ ಪ್ರಕಾರ…

Read More

ಪತ್ರಕರ್ತ ನೌಶಾದ್ ಸೇರಿ 14 ಜನರಿಗೆ ಪ್ರಶಸ್ತಿ

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ಬೆಂಗಳೂರುಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ…

Read More

ರಸ್ತೆ ಕಾಮಗಾರಿಗೆ ಚಾಲನೆ

ಬೆಳಗಾವಿ ರಾಮತೀರ್ಥ ನಗರ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ KHB ಕಾಲೋನಿ ಕಣಬರಗಿ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕಬಹನುಮಂತ ಕೊಂಗಾಲಿ ಚಾಲನೆ ನೀಡಿದರು. , ಕೆ.ಹೆಚ್ ಬಿ ಕಾಲೋನಿ ಹಿರಿಯರಾದ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಮುಂತಾದವರು ಉಪಸ್ಥಿತರಿದ್ದರು.

Read More

ಮಹಿಳೆಯರಿಗೆ ವಂಚನೆ- ತನಿಖಾ ತಂಡ ರಚನೆ

ಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮೈಕ್ರೋಪೈನಾಸ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿದ್ದು, ಈ ಕುರಿತು ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಮೈಕ್ರೋಪೈನಾಸ್ಸ್…

Read More

ಪತ್ರಕರ್ತನ‌ ಮಗ ಹಿರೋ ಆದ ಕಥೆ ಇದು..!

ಬೆಳಗಾವಿ. ಶಿಕ್ಷಕರ ಮಕ್ಕಳು ಶಿಕ್ಷಕರೇ ಆಗಬೇಕು. ಡಾಕ್ಟರ್ ಮಕ್ಕಳು ಡಾಕ್ಟರ್ರೇ ಆಗಬೇಕು. ರಾಜಕಾರಣಿಗಳ ಮಜ್ಕಳು ರಾಜಕಾರಣಿಗಳೇ ಆಗಬೇಕು..! ಇಂತಹುದೊಂದು ರೂಢಿ ಮಾತು ಸಹಜವಾಗಿ ಎಲ್ಲೆಡೆ ಕೇಳಿಬರುತ್ತಿದೆ. ಅಷ್ಟೆ ಅಲ್ಲ ಅದೇ ರೀತಿ‌ ಆಗುತ್ತಿದೆ ಆದರೆ ಇದೆಲ್ಲಕ್ಕಿಂತ ಭಿನ್ನ ಎನ್ನುವುದನ್ನು ತೋರಿಸಿ ಕೊಟ್ಟ ಹುಡುಗ ಅಂದ್ರೆ ಕಿರಣ ರವಿ ಉಪ್ಪಾರ.! ಇಲ್ಲಿ ಸಿಂಪಲ್ ಆಗಿ ಹೇಳಬೇಕೆಂದರೆ ಟೈಮ್ಸ್‌ಆಫ್ ಇಂಡಿಯಾದ ಬೆಳಗಾವಿಯ ಹಿರಿಯ ಪತ್ರಕರ್ತ ಎನಿಸಿಕೊಂಡ ರವಿ ಉಪ್ಪಾರ ಅವರ ಮಗ ಈಗ ಸ್ಮಾರ್ಟ ಸಂಕಟ ಚಲನಚಿತ್ರದ ಹಿರೋ..! ಈ…

Read More

ಅಡಿವೇಶಾಚಾರ್ಯ ಜೋಶಿಯವರ ಜನ್ಮ ಶತಮಾನೋತ್ಸವ

ಅಥಣಿ.ಅಡಿವೇಶಾಚಾರ್ಯ ಜೋಶಿಯವರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅಥಣಿಯ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಪಾಠ, ಪ್ರವಚನ, ನಿತ್ಯ ಪಾರಾಯಣ, ಅನ್ನ ದಾನದಂತಹ ವಿವಿಧ ಧಾರ್ಮಿಕ ಕಾರ್ಯಗಳ ಜೊತೆಗೆ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಬೆಂಗಳೂರಿನ ವಿದ್ಯಾಧೀಶ ಸಂಸ್ಕೃತ ಶೋಧ ಕೇಂದ್ರದ ನಿರ್ದೇಶಕರಾದ ಡಾ.ಕೃಷ್ಣಾಚಾರ್ಯ ಉಪಾಧ್ಯಾಯ ಹೇಳಿದರು.ಅವರು ಅಡಿವೇಶಾಚಾರ್ಯ ಜೋಶಿಯವರ ಜನ್ಮ ಶತಮಾನೋತ್ಸವದ ಅಂಗವಾಗಿ ನರಸಿಂಹ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಜ್ಞಾನ ಸತ್ರದ ಮಂಗಲೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಅಡಿವೇಶಾಚಾರ್ಯರು ನಿವೃತ್ತಿಯ ನಂತರ ತಮ್ಮ ಸಂಪೂರ್ಣ ಸಮಯವನ್ನು ದೇವಸ್ಥಾನಕ್ಕಾಗಿ ಮತ್ತು…

Read More
error: Content is protected !!