ಬದುಕಿನಲ್ಲಿ ನೀರು ಅತ್ಯಂತ ಅವಶ್ಯ
ಬೆಳಗಾವಿ: ಸಕಲ ಜೀವಿಗಳ ಬದುಕಿನಲ್ಲಿ ನೀರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಅದರಲ್ಲೂ ಶುದ್ದ ಕುಡಿಯುವ ನೀರು ಜನರ ಆರೋಗ್ಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಶುದ್ದ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ಮತ್ತು ಅದನ್ನು ಸದ್ಬಳಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು. ಬುಧವಾರ ಆ-20ರಂದು ಬೆಳಗಾವಿ ದಂಡು ಮಂಡಳಿ (ಕಂಟೋನಮೆಂಟ್) ಸಿಬ್ಬಂದಿ ವರ್ಗದವರ ವಸತಿ ಗೃಹ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ…

